ಬಳಿಕ ಮಾತನಾಡಿದ ಅವರು, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡದಂಥ ನಗರಗಳಲ್ಲಿ ಇದು ಕಾರ್ಯನಿರ್ವಹಿಸಲಿದೆ. ಇದೇ ರೀತಿ ಜಿಲ್ಲಾ ಕೇಂದ್ರಗಳಲ್ಲಿಯೂ ಕಾರ್ಯನಿರ್ವಹಿಸಲಿವೆ. ಇದೊಂದು ಹೊಸ ಆರಂಭ’ ಎಂದು ನುಡಿದರು.
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಸಂಚಾರ ದಟ್ಟನೆ ಸಮಸ್ಯೆ ಬೆಳೆಯುತ್ತಿದೆ. ಇದರಿಂದ ನಿಗದಿತ ಸಮಯದಲ್ಲಿ ಆಂಬುಲೆನ್ಸ್ಗಳು ಘಟನಾ ಸ್ಥಳಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಈ ಬೈಕ್ ಆಂಬುಲೆನ್ಸ್ಗಳು ಸೂಕ್ತ ಸಮಯಕ್ಕೆ ಘಟನಾ ಸ್ಥಳವನ್ನು ತಲುಪಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.