‘ಭಟ್ಕಳದಲ್ಲಿ ಭೂಗತ ಪಾತಕಿಗಳಿಂದ ವಿದೇಶಿ ಕರೆನ್ಸಿಯನ್ನು ಖರೀದಿಸಿದ್ದು, ದುಬೈನಲ್ಲಿ ಸಿದ್ಧ ಉಡುಪು ಉದ್ದಿಮೆಗೆ ಹೂಡಿಕೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಆತನ ವಿರುದ್ಧ ಕಸ್ಟಮ್ಸ್ ಕಾಯ್ದೆ– 1962, ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನಗಳ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಭೂಗತ ಹವಾಲಾ ದಂದೆಕೋರರನ್ನು ಪತ್ತೆಮಾಡುವ ದಿಸೆಯಲ್ಲಿ ತನಿಖೆ ಮುಂದುವರಿದಿದೆ’ ಎಂದು ಮಾಹಿತಿ ನೀಡಿದ್ದಾರೆ.