<p><strong>ಚಾಮರಾಜನಗರ:</strong> ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ನಿತ್ಯವೂ ಪ್ರವಾಸಿಗರು ಜಲಪಾತದ ಸೊಬಗು ನೋಡಲು ದಾಂಗುಡಿ ಇಡುತ್ತಿದ್ದಾರೆ. ರಜಾದಿನಗಳಂದು ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತದೆ.</p>.<p>ಕಾವೇರಿ ಜಲಾನಯನ ಪ್ರದೇಶದಲ್ಲಿ ಈಗ ಉತ್ತಮವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳಿಂದ ನೀರಿನ ಹೊರಹರಿವು ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಭರಚುಕ್ಕಿ ಜಲಪಾತಕ್ಕೆ ಜೀವಕಳೆ ಬಂದಿದೆ.<br /> <br /> ಕೇಂದ್ರ ಸರ್ಕಾರ, ಭರಚುಕ್ಕಿ ಜಲಪಾತದ ಅಭಿವೃದ್ಧಿಗೆ ರೂ 4.30 ಕೋಟಿ ಮೀಸಲಿಟ್ಟಿದೆ. ಇದರಲ್ಲಿ ರೂ 1.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಅನುದಾನದ ಅಡಿ ವೀಕ್ಷಣಾ ಗೋಪುರ, ಮೆಟ್ಟಿಲು, ಅತಿಥಿಗೃಹ ಹಾಗೂ ಶೌಚಾಲಯ ನಿರ್ಮಿಸಲಾಗಿದೆ.<br /> <br /> 2007ರ ಡಿಸೆಂಬರ್ 8ರಂದು ಪ್ರಥಮ ಬಾರಿಗೆ ಭರಚುಕ್ಕಿ ಜಲಪಾತೋತ್ಸವ ನಡೆದಿತ್ತು. ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಡಿ ಮತ್ತೆ ಜಲಪಾತೋತ್ಸವ ನಡೆಸಲು ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆದಿದೆ.<br /> <br /> `ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್, `ಭರಚುಕ್ಕಿ ಜಲಪಾತೋತ್ಸವ' ಹಮ್ಮಿಕೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ. ಹೀಗಾಗಿ, ಬರುವ ಆಗಸ್ಟ್ನಲ್ಲಿ ಎರಡು ದಿನ `ಜಲಪಾತೋತ್ಸವ' ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಗಿದೆ.</p>.<p>ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಹೀಗಾಗಿ, ಕಾರ್ಯಕ್ರಮ ನಡೆಯುವ ವೇಳೆ ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಕಡಿಮೆಯಾದರೂ ಚಿಂತಿಸುವ ಅಗತ್ಯವಿಲ್ಲ.</p>.<p>ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮ ದಿನಾಂಕ ನಿಗದಿಪಡಿಸಲಾಗುವುದು' ಎಂದು ಭರಚುಕ್ಕಿ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಉಪ ವಿಭಾಗಾಧಿಕಾರಿ ಎಚ್.ಎಸ್. ಸತೀಶ್ಬಾಬು `ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ನಿತ್ಯವೂ ಪ್ರವಾಸಿಗರು ಜಲಪಾತದ ಸೊಬಗು ನೋಡಲು ದಾಂಗುಡಿ ಇಡುತ್ತಿದ್ದಾರೆ. ರಜಾದಿನಗಳಂದು ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತದೆ.</p>.<p>ಕಾವೇರಿ ಜಲಾನಯನ ಪ್ರದೇಶದಲ್ಲಿ ಈಗ ಉತ್ತಮವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳಿಂದ ನೀರಿನ ಹೊರಹರಿವು ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಭರಚುಕ್ಕಿ ಜಲಪಾತಕ್ಕೆ ಜೀವಕಳೆ ಬಂದಿದೆ.<br /> <br /> ಕೇಂದ್ರ ಸರ್ಕಾರ, ಭರಚುಕ್ಕಿ ಜಲಪಾತದ ಅಭಿವೃದ್ಧಿಗೆ ರೂ 4.30 ಕೋಟಿ ಮೀಸಲಿಟ್ಟಿದೆ. ಇದರಲ್ಲಿ ರೂ 1.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಅನುದಾನದ ಅಡಿ ವೀಕ್ಷಣಾ ಗೋಪುರ, ಮೆಟ್ಟಿಲು, ಅತಿಥಿಗೃಹ ಹಾಗೂ ಶೌಚಾಲಯ ನಿರ್ಮಿಸಲಾಗಿದೆ.<br /> <br /> 2007ರ ಡಿಸೆಂಬರ್ 8ರಂದು ಪ್ರಥಮ ಬಾರಿಗೆ ಭರಚುಕ್ಕಿ ಜಲಪಾತೋತ್ಸವ ನಡೆದಿತ್ತು. ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಡಿ ಮತ್ತೆ ಜಲಪಾತೋತ್ಸವ ನಡೆಸಲು ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆದಿದೆ.<br /> <br /> `ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್, `ಭರಚುಕ್ಕಿ ಜಲಪಾತೋತ್ಸವ' ಹಮ್ಮಿಕೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ. ಹೀಗಾಗಿ, ಬರುವ ಆಗಸ್ಟ್ನಲ್ಲಿ ಎರಡು ದಿನ `ಜಲಪಾತೋತ್ಸವ' ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಗಿದೆ.</p>.<p>ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಹೀಗಾಗಿ, ಕಾರ್ಯಕ್ರಮ ನಡೆಯುವ ವೇಳೆ ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಕಡಿಮೆಯಾದರೂ ಚಿಂತಿಸುವ ಅಗತ್ಯವಿಲ್ಲ.</p>.<p>ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮ ದಿನಾಂಕ ನಿಗದಿಪಡಿಸಲಾಗುವುದು' ಎಂದು ಭರಚುಕ್ಕಿ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಉಪ ವಿಭಾಗಾಧಿಕಾರಿ ಎಚ್.ಎಸ್. ಸತೀಶ್ಬಾಬು `ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>