ಬೆಂಗಳೂರು: ಭೂಮಾಪಕರ ಹುದ್ದೆಗೆ ನಡೆಯುತ್ತಿರುವ ನೇಮಕಾತಿ, ತಾನು ನೀಡುವ ಅಂತಿಮ ಆದೇಶಕ್ಕೆ ಬದ್ಧವಾಗಿರಬೇಕು ಎಂದು ಹೈಕೋರ್ಟ್ ಸೋಮವಾರ, ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರ ಒಟ್ಟು 1,834 ಭೂಮಾಪಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.
`ಹಿಂದೆ ಈ ಹುದ್ದೆಗಳನ್ನು ಸರ್ವೇ ವಿಷಯದಲ್ಲಿ ಜೆಒಸಿ ಓದಿದ ಅಭ್ಯರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ಎಂಜಿನಿಯರಿಂಗ್, ಡಿಪ್ಲೊಮಾ ಅಧ್ಯಯನ ಮಾಡಿದವರಿಗೂ ಮುಕ್ತಗೊಳಿಸಲಾಗಿದೆ. ಇದು ಸರಿಯಲ್ಲ' ಎಂದು ದೂರಿ ಟಿ. ರಾಮಚಂದ್ರ ಮತ್ತು ಇತರರು ಸಲ್ಲಿಸಿರುವ ಅರ್ಜಿ ಬಗ್ಗೆ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.