ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮಗಳಿಂದ (ಕೆಎಸ್ಐಐಡಿಸಿ) ಕೈಗಾರಿಕಾ ನಿವೇಶನ ಹಂಚಿಕೆ ಮಾಡುವ ನಿಯಮಗಳಲ್ಲಿ ಬದಲಾವಣೆ ತಂದಿದ್ದ ಸರ್ಕಾರ 99 ವರ್ಷ ಭೋಗ್ಯದ ಆಧಾರದ ಮೇಲೆ ನೀಡಲು ಆರಂಭಿಸಿತ್ತು. ಇದಕ್ಕೆ ಸಣ್ಣ, ಮಧ್ಯಮ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ, ನಿಯಮ ಬದಲಾವಣೆ ಮಾಡುವಂತೆ ಒತ್ತಾಯ ಮಾಡಿದ್ದರು.