<p><strong>ಬೆಂಗಳೂರು: </strong>ಮಂಗಳೂರಿನ `ಮಾರ್ನಿಂಗ್ ಮಿಸ್ಟ್~ ಹೋಂ ಸ್ಟೇದಲ್ಲಿ ಹುಟ್ಟುಹಬ್ಬದ ನಿಮಿತ್ತ ಶನಿವಾರ `ಪಾರ್ಟಿ~ ನಡೆಸುತ್ತಿದ್ದ ಯುವಕ- ಯುವತಿಯರ ಮೇಲೆ ಹಲ್ಲೆ ನಡೆಸಿದ ನೀಲಿ ಬಣ್ಣದ ಅಂಗಿ ಧರಿಸಿದ್ದ ವ್ಯಕ್ತಿ ಯಾರು ಎಂದು ಸರ್ಕಾರವನ್ನು ಹೈಕೋರ್ಟ್ ಬುಧವಾರ ಕೇಳಿದೆ.<br /> <br /> `ಈ ವ್ಯಕ್ತಿ ಯಾರು. ಘಟನಾ ಸ್ಥಳಕ್ಕೆ ಆತ ಬಂದದ್ದು ಏಕೆ. ಆತನ ವಿರುದ್ಧ ಏನಾದರೂ ಕ್ರಮ ತೆಗೆದುಕೊಳ್ಳಲಾಗಿದೆಯೇ~ ಎಂಬ ಮಾಹಿತಿಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸರ್ಕಾರದಿಂದ ಬಯಸಿದೆ. <br /> <br /> ಈ ವ್ಯಕ್ತಿ ಸೇರಿದಂತೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ತೆಗೆದುಕೊಂಡಿರುವ ಕ್ರಮ ಕುರಿತು ಏಳು ದಿನಗಳ ಒಳಗೆ ಮಾಹಿತಿ ನೀಡುವಂತೆಯೂ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. `ಈ ಘಟನೆಯಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ~ ಎಂದೂ ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಹಲ್ಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸುವಂತೆ ಕೋರಿ ವಕೀಲ ಎಸ್.ವಾಸುದೇವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಈ ಪೀಠ ನಡೆಸುತ್ತಿದೆ.<br /> <br /> <strong>ವಕೀಲರ ವಾದ</strong>: `ಘಟನೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಲ್ಲಿ ವೀಕ್ಷಿಸಿದಾಗ ನನ್ನ ರಕ್ತ ಕುದಿಯತೊಡಗಿತು. ಇಂತಹ ಹೇಯ ಕೃತ್ಯ ಕರ್ನಾಟಕದಲ್ಲಿ ನಡೆದಿರುವುದು ದುರದೃಷ್ಟಕರ. ಪೊಲೀಸರು ಸ್ಥಳದಲ್ಲಿಯೇ ಇದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಮೂಕಪ್ರೇಕ್ಷಕರಾಗಿದ್ದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು~ ಎಂದು ವಾಸುದೇವ್ ಅವರು ವಾದಿಸಿದರು. ಆಗ ನ್ಯಾ.ಸೇನ್, `ಇದು ಎಲ್ಲರೂ ತಲೆತಗ್ಗಿಸುವ ವಿಷಯ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಂಗಳೂರಿನ `ಮಾರ್ನಿಂಗ್ ಮಿಸ್ಟ್~ ಹೋಂ ಸ್ಟೇದಲ್ಲಿ ಹುಟ್ಟುಹಬ್ಬದ ನಿಮಿತ್ತ ಶನಿವಾರ `ಪಾರ್ಟಿ~ ನಡೆಸುತ್ತಿದ್ದ ಯುವಕ- ಯುವತಿಯರ ಮೇಲೆ ಹಲ್ಲೆ ನಡೆಸಿದ ನೀಲಿ ಬಣ್ಣದ ಅಂಗಿ ಧರಿಸಿದ್ದ ವ್ಯಕ್ತಿ ಯಾರು ಎಂದು ಸರ್ಕಾರವನ್ನು ಹೈಕೋರ್ಟ್ ಬುಧವಾರ ಕೇಳಿದೆ.<br /> <br /> `ಈ ವ್ಯಕ್ತಿ ಯಾರು. ಘಟನಾ ಸ್ಥಳಕ್ಕೆ ಆತ ಬಂದದ್ದು ಏಕೆ. ಆತನ ವಿರುದ್ಧ ಏನಾದರೂ ಕ್ರಮ ತೆಗೆದುಕೊಳ್ಳಲಾಗಿದೆಯೇ~ ಎಂಬ ಮಾಹಿತಿಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸರ್ಕಾರದಿಂದ ಬಯಸಿದೆ. <br /> <br /> ಈ ವ್ಯಕ್ತಿ ಸೇರಿದಂತೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ತೆಗೆದುಕೊಂಡಿರುವ ಕ್ರಮ ಕುರಿತು ಏಳು ದಿನಗಳ ಒಳಗೆ ಮಾಹಿತಿ ನೀಡುವಂತೆಯೂ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. `ಈ ಘಟನೆಯಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ~ ಎಂದೂ ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಹಲ್ಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸುವಂತೆ ಕೋರಿ ವಕೀಲ ಎಸ್.ವಾಸುದೇವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಈ ಪೀಠ ನಡೆಸುತ್ತಿದೆ.<br /> <br /> <strong>ವಕೀಲರ ವಾದ</strong>: `ಘಟನೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಲ್ಲಿ ವೀಕ್ಷಿಸಿದಾಗ ನನ್ನ ರಕ್ತ ಕುದಿಯತೊಡಗಿತು. ಇಂತಹ ಹೇಯ ಕೃತ್ಯ ಕರ್ನಾಟಕದಲ್ಲಿ ನಡೆದಿರುವುದು ದುರದೃಷ್ಟಕರ. ಪೊಲೀಸರು ಸ್ಥಳದಲ್ಲಿಯೇ ಇದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಮೂಕಪ್ರೇಕ್ಷಕರಾಗಿದ್ದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು~ ಎಂದು ವಾಸುದೇವ್ ಅವರು ವಾದಿಸಿದರು. ಆಗ ನ್ಯಾ.ಸೇನ್, `ಇದು ಎಲ್ಲರೂ ತಲೆತಗ್ಗಿಸುವ ವಿಷಯ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>