‘ರೈತಸಂಘದ ಪದಾಧಿಕಾರಿಗಳ ಸಭೆಯಲ್ಲಿ ಐವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ನಂದಿನಿ ಜಯರಾಂ, ಸುನೀತಾ ಪುಟ್ಟಣ್ಣಯ್ಯ, ಎಂ.ವಿ.ರಾಜೇಗೌಡ, ಬಡಗಲಪುರ ನಾಗೇಂದ್ರ ಹಾಗೂ ನನ್ನ ಹೆಸರು ಪಟ್ಟಿಯಲ್ಲಿವೆ. ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಕಾರ್ಯಕಾರಿಣಿಯಲ್ಲಿ ನಿರ್ಧಾರ ಪ್ರಕಟಗೊಳ್ಳಲಿದೆ’ ಎಂದು ರೈತಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್ ಹೇಳಿದರು.