<p><strong>ಮಡಿಕೇರಿ:</strong> ತಮ್ಮ ಅವಧಿಯಲ್ಲಿ ‘ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದರೆ ಸಿಬಿಐ ತನಿಖೆಗೆ ವಹಿಸಲಿ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಇಲ್ಲಿ ಬುಧವಾರ ಸವಾಲು ಹಾಕಿದರು.</p>.<p><br /> ‘ಬೆಳಗಾವಿ ಅಧಿವೇಶನದಲ್ಲಿ ವರದಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಅದೇ ಅಧಿವೇಶನದಲ್ಲಿ ತನಿಖೆಗೂ ಒಪ್ಪಿಸಲಿ. ಜತೆಗೆ, ಮಂಪರು ಪರೀಕ್ಷೆಯೂ ನಡೆದರೆ ಯಾರು ತಪ್ಪಿತಸ್ಥರೆಂಬುದು ಬೆಳಕಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತೀರ್ಮಾನ ತೆಗೆದುಕೊಳ್ಳಲಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ನಾನು ಇಂಧನ ಸಚಿವೆಯಾಗಿದ್ದ ಅವಧಿಯಲ್ಲಿ 20 ವರ್ಷಕ್ಕೆ ವಿದ್ಯುತ್ ಖರೀದಿ ಮಾಡುವ ಕಡತವೊಂದು ಬಂದಿತ್ತು. ಇಷ್ಟು ದೀರ್ಘಾವಧಿ ಯೋಜನೆಗೆ ಒಪ್ಪಿಗೆ ನೀಡುವ ಅವಶ್ಯಕತೆ ಇರಲಿಲ್ಲ. ರಾಜ್ಯದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಬೇಕು ಎನ್ನುವ ನಿಟ್ಟಿನಲ್ಲಿ ಆ ಪ್ರಸ್ತಾವ ತಿರಸ್ಕರಿಸಿದ್ದೆ. ಆದರೆ, ಜಿಂದಾಲ್ನಿಂದ ವಿದ್ಯುತ್ ಖರೀದಿ<br /> ಸಲು ಒಪ್ಪಿಗೆ ನೀಡಿರಲಿಲ್ಲ ಎನ್ನುವ ಆರೋಪವನ್ನು ಇದೀಗ ಮಾಡಲಾಗುತ್ತಿದ್ದು, ಅದು ಸುಳ್ಳು’ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ತಮ್ಮ ಅವಧಿಯಲ್ಲಿ ‘ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದರೆ ಸಿಬಿಐ ತನಿಖೆಗೆ ವಹಿಸಲಿ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಇಲ್ಲಿ ಬುಧವಾರ ಸವಾಲು ಹಾಕಿದರು.</p>.<p><br /> ‘ಬೆಳಗಾವಿ ಅಧಿವೇಶನದಲ್ಲಿ ವರದಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಅದೇ ಅಧಿವೇಶನದಲ್ಲಿ ತನಿಖೆಗೂ ಒಪ್ಪಿಸಲಿ. ಜತೆಗೆ, ಮಂಪರು ಪರೀಕ್ಷೆಯೂ ನಡೆದರೆ ಯಾರು ತಪ್ಪಿತಸ್ಥರೆಂಬುದು ಬೆಳಕಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತೀರ್ಮಾನ ತೆಗೆದುಕೊಳ್ಳಲಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ನಾನು ಇಂಧನ ಸಚಿವೆಯಾಗಿದ್ದ ಅವಧಿಯಲ್ಲಿ 20 ವರ್ಷಕ್ಕೆ ವಿದ್ಯುತ್ ಖರೀದಿ ಮಾಡುವ ಕಡತವೊಂದು ಬಂದಿತ್ತು. ಇಷ್ಟು ದೀರ್ಘಾವಧಿ ಯೋಜನೆಗೆ ಒಪ್ಪಿಗೆ ನೀಡುವ ಅವಶ್ಯಕತೆ ಇರಲಿಲ್ಲ. ರಾಜ್ಯದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಬೇಕು ಎನ್ನುವ ನಿಟ್ಟಿನಲ್ಲಿ ಆ ಪ್ರಸ್ತಾವ ತಿರಸ್ಕರಿಸಿದ್ದೆ. ಆದರೆ, ಜಿಂದಾಲ್ನಿಂದ ವಿದ್ಯುತ್ ಖರೀದಿ<br /> ಸಲು ಒಪ್ಪಿಗೆ ನೀಡಿರಲಿಲ್ಲ ಎನ್ನುವ ಆರೋಪವನ್ನು ಇದೀಗ ಮಾಡಲಾಗುತ್ತಿದ್ದು, ಅದು ಸುಳ್ಳು’ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>