<p><strong>ಬೆಂಗಳೂರು:</strong> ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಗಾಳಿಯ ಅಬ್ಬರಕ್ಕೆ ಬೆಂಗಳೂರು, ರಾಮನಗರ ಜಿಲ್ಲೆ ಮತ್ತು ಗದಗ ಜಿಲ್ಲೆಗಳಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ರಾಜಧಾನಿಯ ವಿಜಯನಗರ, ಮಲ್ಲೇಶ್ವರ, ರಾಜಾಜಿನಗರ, ಓಕಳಿಪುರ, ಜಯನಗರ, ನಾಯಂಡಹಳ್ಳಿ, ಮಾಗಡಿ ರಸ್ತೆ, ಶಾಂತಿ ನಗರ, ಕೆ.ಪಿ ಆಗ್ರಹಾರ ಮತ್ತು ಕೋರಮಂಗಲದಲ್ಲಿ ಉತ್ತಮ ಮಳೆಯಾಗಿದೆ.</p>.<p>ಮಳೆಗೂ ಮುನ್ನ ಬೀಸಿದ ಗಾಳಿಗೆ ಆರ್.ಪಿ.ಸಿ ಬಡಾವಣೆ, ನಾಗರಬಾವಿ, ಕೆ. ಪಿ ಅಗ್ರಹಾರದಲ್ಲಿ ಮರ ಬಿದ್ದು ಹಾಗೂ ಓಕಳಿಪುರ ಜಂಕ್ಷನ್ನ ಅಂಡರ್ಪಾಸ್ನಲ್ಲಿ ಮೂರು ಅಡಿಗಳಷ್ಟು ನೀರು ತುಂಬಿದ್ದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.</p>.<p>ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆಯಾದರೆ, ಕೊಪ್ಪ ತಾಲ್ಲೂಕಿನ ಜಯಪುರ, ಹೇರೂರು, ಶಾಂತಿಪುರ, ಬನ್ನೂರು, ಕಳಸ ಸೇರಿದಂತೆ ವಿವಿಧ ಭಾಗಗಳಲ್ಲಿ ಜಿಟಿಜಿಟಿ ಮಳೆ ಸುರಿದಿದೆ.</p>.<p>ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಗಾಳಿ, ಮಳೆಯಿಂದಾಗಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೇರೂರಿನ ಹಿರಿಯ ಪ್ರಾಥಮಿಕ ಶಾಲಾ ಕಾಂಪೌಂಡ್ ಮೇಲೆ ಮರ ಬಿದ್ದು ಹಾನಿಯಾಗಿದೆ.</p>.<p>ಕೊಡಗು ಜಿಲ್ಲೆಯ ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಗೋಣಿಕೊಪ್ಪಲು, ಶನಿವಾರಸಂತೆ, ವಿರಾಜಪೇಟೆ, ಕುಶಾಲನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ವಾರದಿಂದ ಮಳೆಯಾಗುತ್ತಿದ್ದರಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ.</p>.<p>ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಸಂಜೆ ಒಂದು ಗಂಟೆ ಕಾಲ ಸಾಧಾರಣ ಮಳೆಯಾಯಿತು. ನಾಲ್ಕೈದು ದಿನಗಳಿಂದ ಮಳೆ ಬರುತ್ತಿರುವುದರಿಂದ ತಂಬಾಕು ನಾಟಿ ಕೆಲಸ ಚುರುಕುಗೊಂಡಿದೆ.</p>.<p>ಗದಗ–ಬೆಟಗೇರಿ ಅವಳಿ ನಗರ, ನರಗುಂದ, ಲಕ್ಷ್ಮೇಶ್ವರ, ನರೇಗಲ್ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.</p>.<p>ನರಗುಂದ ತಾಲ್ಲೂಕಿನಾದ್ಯಂತ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಮನೆಗಳಿಗೆ ಹೊದಿಸಲಾಗಿದ್ದ ತಗಡಿನ ಶೀಟ್ಗಳು ಗಾಳಿಯ ಅಬ್ಬರಕ್ಕೆ ಹಾರಿಹೋಗಿವೆ.</p>.<p>ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯಲ್ಲಿ ಮಧ್ಯಾಹ್ನ ಒಂದು ತಾಸು ಮಳೆಯಾಗಿದೆ. ಧಾರವಾಡದಲ್ಲಿ ಸಂಜೆ ತುಂತುರು ಮಳೆಯಾಗಿದೆ.</p>.<p>ರಭಸದ ಗಾಳಿ, ಮಳೆ: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಗೋಕಾಕದಲ್ಲಿಯೂ ಮಳೆಯಾಗಿದೆ. ಬಲವಾದ ಗಾಳಿ ಬೀಸಿದ್ದರಿಂದ ಅನೇಕ ಮನೆಗಳ ಚಾವಣಿಗೆ ಹೊದಿಸಿದ ಶೀಟ್ಗಳು ಹಾರಿಹೋಗಿವೆ. ಕೆಲವೆಡೆ ವಿದ್ಯುತ್ ಕಂಬ ಬಿದ್ದಿರುವ ಬಗ್ಗೆ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಗಾಳಿಯ ಅಬ್ಬರಕ್ಕೆ ಬೆಂಗಳೂರು, ರಾಮನಗರ ಜಿಲ್ಲೆ ಮತ್ತು ಗದಗ ಜಿಲ್ಲೆಗಳಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ರಾಜಧಾನಿಯ ವಿಜಯನಗರ, ಮಲ್ಲೇಶ್ವರ, ರಾಜಾಜಿನಗರ, ಓಕಳಿಪುರ, ಜಯನಗರ, ನಾಯಂಡಹಳ್ಳಿ, ಮಾಗಡಿ ರಸ್ತೆ, ಶಾಂತಿ ನಗರ, ಕೆ.ಪಿ ಆಗ್ರಹಾರ ಮತ್ತು ಕೋರಮಂಗಲದಲ್ಲಿ ಉತ್ತಮ ಮಳೆಯಾಗಿದೆ.</p>.<p>ಮಳೆಗೂ ಮುನ್ನ ಬೀಸಿದ ಗಾಳಿಗೆ ಆರ್.ಪಿ.ಸಿ ಬಡಾವಣೆ, ನಾಗರಬಾವಿ, ಕೆ. ಪಿ ಅಗ್ರಹಾರದಲ್ಲಿ ಮರ ಬಿದ್ದು ಹಾಗೂ ಓಕಳಿಪುರ ಜಂಕ್ಷನ್ನ ಅಂಡರ್ಪಾಸ್ನಲ್ಲಿ ಮೂರು ಅಡಿಗಳಷ್ಟು ನೀರು ತುಂಬಿದ್ದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.</p>.<p>ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆಯಾದರೆ, ಕೊಪ್ಪ ತಾಲ್ಲೂಕಿನ ಜಯಪುರ, ಹೇರೂರು, ಶಾಂತಿಪುರ, ಬನ್ನೂರು, ಕಳಸ ಸೇರಿದಂತೆ ವಿವಿಧ ಭಾಗಗಳಲ್ಲಿ ಜಿಟಿಜಿಟಿ ಮಳೆ ಸುರಿದಿದೆ.</p>.<p>ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಗಾಳಿ, ಮಳೆಯಿಂದಾಗಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೇರೂರಿನ ಹಿರಿಯ ಪ್ರಾಥಮಿಕ ಶಾಲಾ ಕಾಂಪೌಂಡ್ ಮೇಲೆ ಮರ ಬಿದ್ದು ಹಾನಿಯಾಗಿದೆ.</p>.<p>ಕೊಡಗು ಜಿಲ್ಲೆಯ ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಗೋಣಿಕೊಪ್ಪಲು, ಶನಿವಾರಸಂತೆ, ವಿರಾಜಪೇಟೆ, ಕುಶಾಲನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ವಾರದಿಂದ ಮಳೆಯಾಗುತ್ತಿದ್ದರಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ.</p>.<p>ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಸಂಜೆ ಒಂದು ಗಂಟೆ ಕಾಲ ಸಾಧಾರಣ ಮಳೆಯಾಯಿತು. ನಾಲ್ಕೈದು ದಿನಗಳಿಂದ ಮಳೆ ಬರುತ್ತಿರುವುದರಿಂದ ತಂಬಾಕು ನಾಟಿ ಕೆಲಸ ಚುರುಕುಗೊಂಡಿದೆ.</p>.<p>ಗದಗ–ಬೆಟಗೇರಿ ಅವಳಿ ನಗರ, ನರಗುಂದ, ಲಕ್ಷ್ಮೇಶ್ವರ, ನರೇಗಲ್ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.</p>.<p>ನರಗುಂದ ತಾಲ್ಲೂಕಿನಾದ್ಯಂತ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಮನೆಗಳಿಗೆ ಹೊದಿಸಲಾಗಿದ್ದ ತಗಡಿನ ಶೀಟ್ಗಳು ಗಾಳಿಯ ಅಬ್ಬರಕ್ಕೆ ಹಾರಿಹೋಗಿವೆ.</p>.<p>ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯಲ್ಲಿ ಮಧ್ಯಾಹ್ನ ಒಂದು ತಾಸು ಮಳೆಯಾಗಿದೆ. ಧಾರವಾಡದಲ್ಲಿ ಸಂಜೆ ತುಂತುರು ಮಳೆಯಾಗಿದೆ.</p>.<p>ರಭಸದ ಗಾಳಿ, ಮಳೆ: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಗೋಕಾಕದಲ್ಲಿಯೂ ಮಳೆಯಾಗಿದೆ. ಬಲವಾದ ಗಾಳಿ ಬೀಸಿದ್ದರಿಂದ ಅನೇಕ ಮನೆಗಳ ಚಾವಣಿಗೆ ಹೊದಿಸಿದ ಶೀಟ್ಗಳು ಹಾರಿಹೋಗಿವೆ. ಕೆಲವೆಡೆ ವಿದ್ಯುತ್ ಕಂಬ ಬಿದ್ದಿರುವ ಬಗ್ಗೆ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>