<p>ಬೆಂಗಳೂರು: ‘ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಆವರಣದಲ್ಲಿ ₨100 ಕೋಟಿ ವೆಚ್ಚದಲ್ಲಿ ಮಾನಸಿಕ ಕಾಯಿಲೆ ಪೀಡಿತರ ಪುನರ್ವಸತಿ ಕೇಂದ್ರ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.<br /> <br /> ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಸಫಾಯಿ ಕರ್ಮಚಾರಿಗಳು ಹಾಗೂ ಅಂಗವಿಕಲರಿಗಾಗಿ ರೂಪಿಸಿರುವ ‘ಸ್ವಾವಲಂಬನ’ ಯೋಜನೆಗೆ ಶನಿವಾರ ಇಲ್ಲಿ ಚಾಲನೆ ನೀಡಿ ಮಾತನಾಡಿದರು.<br /> <br /> ‘ಮಾನಸಿಕ ಕಾಯಿಲೆಗಳಿಂದ ನರಳುತ್ತಿರುವವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಲು ಇಂಥ ಕೇಂದ್ರದ ಅಗತ್ಯವಿದೆ’ ಎಂದು ಮಾಹಿತಿ ನೀಡಿದರು.<br /> ‘ಮೊದಲ ಹಂತದಲ್ಲಿ ಸುಮಾರು ₨25 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಪಡೆಯಲಿದ್ದೇವೆ’ ಎಂದು ಹೇಳಿದರು.<br /> <br /> ‘ಅಂಗವಿಕಲರೆಂದು ಗುರುತಿಸಲು ಏಳು ಅಂಗವೈಕಲ್ಯದ ನ್ಯೂನತೆಗಳ ಜತೆಯಲ್ಲಿ ಹೆಚ್ಚುವರಿಯಾಗಿ 12 ನ್ಯೂನತೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಅಂಗವಿಕಲರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಪ್ರಚಾರ ನಡೆಯಬೇಕಿದೆ’ ಎಂದು ತಿಳಿಸಿದರು.<br /> <br /> ‘ಅಂಗವಿಕಲರು ಸಹಾಯಧನವನ್ನು ಪಡೆಯಲು ₨6,500 ಇದ್ದ ಆದಾಯದ ಮಿತಿಯನ್ನು, ₨ 20 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ವಾವಲಂಬನಾ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ರಾಜ್ಯದಲ್ಲಿ 302 ಸಫಾಯಿ ಕರ್ಮಚಾರಿಗಳು!: ‘ಎಷ್ಟೇ ಕಾನೂನುಗಳನ್ನು ತಂದರೂ ರಾಜ್ಯದಲ್ಲಿ ಮಲ ಹೊರುವವರು ಇನ್ನೂ ಇದ್ದಾರೆ. ಪ್ರಸ್ತುತ ನಡೆದ ಸಮೀಕ್ಷೆಯಲ್ಲಿ 302 ಮಂದಿ ಮಲ ಹೊರುವವರನ್ನು ಗುರುತಿಸಲಾಗಿದ್ದು, ಈ ಪ್ರತಿಯೊಬ್ಬರಿಗೂ ₨ 40 ಸಾವಿರ ಸಹಾಯ ಧನ ಒದಗಿಸಲಾಗುವುದು. ಮಲ ಹೊರುವ ಪದ್ದತಿಯನ್ನು ಕೈ ಬಿಟ್ಟು, ಅವರು ಹೊಸ ಉದ್ಯೋಗವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಹಾಯಧನ ನೀಡಲಾಗುತ್ತದೆ’ ಎಂದರು.<br /> <br /> ಬೆಂಗಳೂರಿನಲ್ಲಿಯೇ 200 ಮಂದಿ: ಬಿಬಿಎಂಪಿ ಆಯುಕ್ತ ಲಕ್ಷ್ಮಿನಾರಾಯಣ, ‘ಬೆಂಗಳೂರು ನಗರದಲ್ಲಿ ಮಲ ಹೊರುವ 200 ಕಾರ್ಮಿಕರನ್ನು ಗುರುತಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಆವರಣದಲ್ಲಿ ₨100 ಕೋಟಿ ವೆಚ್ಚದಲ್ಲಿ ಮಾನಸಿಕ ಕಾಯಿಲೆ ಪೀಡಿತರ ಪುನರ್ವಸತಿ ಕೇಂದ್ರ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.<br /> <br /> ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಸಫಾಯಿ ಕರ್ಮಚಾರಿಗಳು ಹಾಗೂ ಅಂಗವಿಕಲರಿಗಾಗಿ ರೂಪಿಸಿರುವ ‘ಸ್ವಾವಲಂಬನ’ ಯೋಜನೆಗೆ ಶನಿವಾರ ಇಲ್ಲಿ ಚಾಲನೆ ನೀಡಿ ಮಾತನಾಡಿದರು.<br /> <br /> ‘ಮಾನಸಿಕ ಕಾಯಿಲೆಗಳಿಂದ ನರಳುತ್ತಿರುವವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಲು ಇಂಥ ಕೇಂದ್ರದ ಅಗತ್ಯವಿದೆ’ ಎಂದು ಮಾಹಿತಿ ನೀಡಿದರು.<br /> ‘ಮೊದಲ ಹಂತದಲ್ಲಿ ಸುಮಾರು ₨25 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಪಡೆಯಲಿದ್ದೇವೆ’ ಎಂದು ಹೇಳಿದರು.<br /> <br /> ‘ಅಂಗವಿಕಲರೆಂದು ಗುರುತಿಸಲು ಏಳು ಅಂಗವೈಕಲ್ಯದ ನ್ಯೂನತೆಗಳ ಜತೆಯಲ್ಲಿ ಹೆಚ್ಚುವರಿಯಾಗಿ 12 ನ್ಯೂನತೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಅಂಗವಿಕಲರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಪ್ರಚಾರ ನಡೆಯಬೇಕಿದೆ’ ಎಂದು ತಿಳಿಸಿದರು.<br /> <br /> ‘ಅಂಗವಿಕಲರು ಸಹಾಯಧನವನ್ನು ಪಡೆಯಲು ₨6,500 ಇದ್ದ ಆದಾಯದ ಮಿತಿಯನ್ನು, ₨ 20 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ವಾವಲಂಬನಾ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ರಾಜ್ಯದಲ್ಲಿ 302 ಸಫಾಯಿ ಕರ್ಮಚಾರಿಗಳು!: ‘ಎಷ್ಟೇ ಕಾನೂನುಗಳನ್ನು ತಂದರೂ ರಾಜ್ಯದಲ್ಲಿ ಮಲ ಹೊರುವವರು ಇನ್ನೂ ಇದ್ದಾರೆ. ಪ್ರಸ್ತುತ ನಡೆದ ಸಮೀಕ್ಷೆಯಲ್ಲಿ 302 ಮಂದಿ ಮಲ ಹೊರುವವರನ್ನು ಗುರುತಿಸಲಾಗಿದ್ದು, ಈ ಪ್ರತಿಯೊಬ್ಬರಿಗೂ ₨ 40 ಸಾವಿರ ಸಹಾಯ ಧನ ಒದಗಿಸಲಾಗುವುದು. ಮಲ ಹೊರುವ ಪದ್ದತಿಯನ್ನು ಕೈ ಬಿಟ್ಟು, ಅವರು ಹೊಸ ಉದ್ಯೋಗವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಹಾಯಧನ ನೀಡಲಾಗುತ್ತದೆ’ ಎಂದರು.<br /> <br /> ಬೆಂಗಳೂರಿನಲ್ಲಿಯೇ 200 ಮಂದಿ: ಬಿಬಿಎಂಪಿ ಆಯುಕ್ತ ಲಕ್ಷ್ಮಿನಾರಾಯಣ, ‘ಬೆಂಗಳೂರು ನಗರದಲ್ಲಿ ಮಲ ಹೊರುವ 200 ಕಾರ್ಮಿಕರನ್ನು ಗುರುತಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>