ಹುಬ್ಬಳ್ಳಿ: ಮಹದಾಯಿ, ಕಳಸಾ– ಬಂಡೂರಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸುವುದಕ್ಕಾಗಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಭೇಟಿಗೆ ಇದೇ 15ರೊಳಗೆ ನಿಯೋಗ ಹೋಗಲು ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಕಳಸಾ– ಬಂಡೂರಿ ಹೋರಾಟಗಾರರ ಸಭೆಯಲ್ಲಿ ನಿರ್ಣಯಿಸಲಾಯಿತು.
ಮುಖ್ಯಮಂತ್ರಿ ಅವರು ತಮ್ಮ ಸಚಿವ ಸಂಪುಟದ ಸದಸ್ಯರು ಹಾಗೂ ಹೋರಾಟಗಾರರನ್ನು ಕರೆದುಕೊಂಡು ಗೋವಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ಹೋರಾಟಗಾರರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಲು ನಿರ್ಧರಿಸಲಾಯಿತು.