ಹಾವೇರಿ: ನಗರದ ಗುತ್ತಿಗೆದಾರರೊಬ್ಬರು ಸಲ್ಲಿಸಿದ ದೂರಿನನ್ವಯ ಹಾವೇರಿಯ ಮಾಜಿ ಶಾಸಕ ನೆಹರೂ ಓಲೇಕಾರ ಹಾಗೂ ಅವರ ಇಬ್ಬರ ಪುತ್ರರ ವಿರುದ್ಧ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯ ಬಂಧನದ ಆದೇಶ ಜಾರಿಗೊಳಿಸಿದೆ. ಇದಲ್ಲದೇ, ನಗರಸಭೆಯ ಆರು ಜನ ಅಧಿಕಾರಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲು ಆದೇಶಿಸಿದೆ.
ಮಾಜಿ ಶಾಸಕ ನೆಹರೂ ಓಲೇಕಾರ, ಅವರ ಇಬ್ಬರು ಪುತ್ರರು ಸೇರಿದಂತೆ ಏಳು ಜನರ ವಿರುದ್ಧ ಸ್ವಜನ ಪಕ್ಷಪಾತ, ಖೊಟ್ಟಿ ಪ್ರಮಾಣಪತ್ರ ಹಾಗೂ ಲೋಕಾಯುಕ್ತಕ್ಕೆ ಸುಳ್ಳು ಆದಾಯ ತೋರಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಗುತ್ತಿಗೆದಾರರಾದ ಶಶಿಧರ ಹಳ್ಳಿಕೇರಿ ಅವರು ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.
ದೂರಿನ ವಿಚಾರಣೆ ಕೈಗೆತ್ತಿಕೊಂಡ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ಎಚ್.ಪಿ.ಸಂದೇಶ ಅವರು, ದೂರಿನಲ್ಲಿದ್ದ ಪ್ರಥಮ ಆರೋಪಿಯಾದ ಮಾಜಿ ಶಾಸಕ ನೆಹರೂ ಓಲೇಕಾರ, ಎರಡು ಮತ್ತು ಮೂರನೇ ಆರೋಪಿಗಳಾದ ಓಲೇಕಾರ ಅವರ ಪುತ್ರರಾದ ಮಂಜುನಾಥ ಹಾಗೂ ದೇವರಾಜ ವಿರುದ್ಧ ಬಂಧನಕ್ಕೆ ಆದೇಶಿಸಿದ್ದಾರಲ್ಲದೇ,