ಆರು ಬಾರಿ ವಿಧಾನಸಭೆಯ ಸದಸ್ಯರಾಗಿದ್ದ ಅವರು, 1984ರಿಂದ 1989ರ ಅವಧಿಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದರು. ಸಾರಿಗೆ ಹಾಗೂ ಪ್ರವಾಸೋದ್ಯಮ (1973), ಸಹಕಾರ (1974), ಕೃಷಿ ಹಾಗೂ ಸಂಸದೀಯ ವ್ಯವಹಾರ (1978), ಕೃಷಿ, ತೋಟಗಾರಿಕೆ, ಶಿಕ್ಷಣ ಮತ್ತು ಅರಣ್ಯ (1989) ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. 1981ರಲ್ಲಿ ವಿಧಾನಸಭೆಯ ಅಧ್ಯಕ್ಷರೂ ಆಗಿದ್ದರು. ನಂತರ ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲೂ ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.