<p><strong>ಬೆಂಗಳೂರು: </strong>ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅದರ ಮೇಲೆ ರಾಜ್ಯ ಸರ್ಕಾರ ವಿಧಿಸುವ ಮಾರಾಟ ತೆರಿಗೆಯ ಪ್ರಮಾಣವನ್ನು ಇಳಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.<br /> <br /> ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುತ್ತಿದೆ. ಇದರಿಂದ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಹೀಗಾಗಿ ರಾಜ್ಯ ಸರ್ಕಾರದ ತೆರಿಗೆ ಪ್ರಮಾಣವನ್ನು ಇಳಿಸುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ಅವರು ತಿಳಿಸಿದರು.<br /> <br /> ಬೆಲೆ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಅವರು ಖಂಡಿಸಿದರು. ದರ ಇಳಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿದರು.<br /> <br /> <strong>ಕೊಪ್ಪಳ ಪ್ರವಾಸ:</strong> `ಮುಖ್ಯಮಂತ್ರಿಯಾದ ನಂತರ ಕೊಪ್ಪಳದಲ್ಲಿ ಮೊದಲ ಚುನಾವಣೆ ನಡೆಯುತ್ತಿದೆ. ಚುನಾವಣಾ ಪ್ರಚಾರದಲ್ಲಿ ಇದೇ 20ರ ನಂತರ ಸಾಮಾನ್ಯ ಕಾರ್ಯಕರ್ತನಾಗಿ ಭಾಗವಹಿಸುತ್ತೇನೆ~ ಎಂದು ಅವರು ಹೇಳಿದರು. <br /> <br /> ಎರಡು-ಮೂರು ದಿನ ಕೊಪ್ಪಳದಲ್ಲೇ ಇದ್ದು ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಪ್ರಚಾರ ಕೈಗೊಳ್ಳುವುದಾಗಿ ಅವರು ವಿವರಿಸಿದರು.<br /> <br /> <strong>ಪೆಟ್ರೋಲ್ ಮೇಲೆ ಎಷ್ಟು ತೆರಿಗೆ?<br /> ಬೆಂಗಳೂರು:</strong> ರಾಜ್ಯ ಸರ್ಕಾರ ಪೆಟ್ರೋಲ್ ಮೇಲೆ ಶೇ 25ರಷ್ಟು ಮಾರಾಟ ತೆರಿಗೆಯನ್ನು ವಿಧಿಸುತ್ತಿದೆ. <br /> ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪ್ರಸ್ತುತ ಬೆಂಗಳೂರಿನಲ್ಲಿ ರೂ 74.82 ಇದೆ. ಇದರಲ್ಲಿ ಮಾರಾಟ ತೆರಿಗೆಯೇ 14.80 ರೂಪಾಯಿ ಎಂದು ಸರ್ಕಾರದ ಮೂಲಗಳು ತಿಳಿಸಿವೆ.<br /> <br /> ಶೇ 25ರ ಮಾರಾಟ ತೆರಿಗೆಯನ್ನು ಇಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೇ ಇದ್ದು, ಆ ಕುರಿತು ಚಿಂತನೆ ನಡೆಸುವ ಇಂಗಿತವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅದರ ಮೇಲೆ ರಾಜ್ಯ ಸರ್ಕಾರ ವಿಧಿಸುವ ಮಾರಾಟ ತೆರಿಗೆಯ ಪ್ರಮಾಣವನ್ನು ಇಳಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.<br /> <br /> ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುತ್ತಿದೆ. ಇದರಿಂದ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಹೀಗಾಗಿ ರಾಜ್ಯ ಸರ್ಕಾರದ ತೆರಿಗೆ ಪ್ರಮಾಣವನ್ನು ಇಳಿಸುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ಅವರು ತಿಳಿಸಿದರು.<br /> <br /> ಬೆಲೆ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಅವರು ಖಂಡಿಸಿದರು. ದರ ಇಳಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ಹೇಳಿದರು.<br /> <br /> <strong>ಕೊಪ್ಪಳ ಪ್ರವಾಸ:</strong> `ಮುಖ್ಯಮಂತ್ರಿಯಾದ ನಂತರ ಕೊಪ್ಪಳದಲ್ಲಿ ಮೊದಲ ಚುನಾವಣೆ ನಡೆಯುತ್ತಿದೆ. ಚುನಾವಣಾ ಪ್ರಚಾರದಲ್ಲಿ ಇದೇ 20ರ ನಂತರ ಸಾಮಾನ್ಯ ಕಾರ್ಯಕರ್ತನಾಗಿ ಭಾಗವಹಿಸುತ್ತೇನೆ~ ಎಂದು ಅವರು ಹೇಳಿದರು. <br /> <br /> ಎರಡು-ಮೂರು ದಿನ ಕೊಪ್ಪಳದಲ್ಲೇ ಇದ್ದು ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಪ್ರಚಾರ ಕೈಗೊಳ್ಳುವುದಾಗಿ ಅವರು ವಿವರಿಸಿದರು.<br /> <br /> <strong>ಪೆಟ್ರೋಲ್ ಮೇಲೆ ಎಷ್ಟು ತೆರಿಗೆ?<br /> ಬೆಂಗಳೂರು:</strong> ರಾಜ್ಯ ಸರ್ಕಾರ ಪೆಟ್ರೋಲ್ ಮೇಲೆ ಶೇ 25ರಷ್ಟು ಮಾರಾಟ ತೆರಿಗೆಯನ್ನು ವಿಧಿಸುತ್ತಿದೆ. <br /> ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪ್ರಸ್ತುತ ಬೆಂಗಳೂರಿನಲ್ಲಿ ರೂ 74.82 ಇದೆ. ಇದರಲ್ಲಿ ಮಾರಾಟ ತೆರಿಗೆಯೇ 14.80 ರೂಪಾಯಿ ಎಂದು ಸರ್ಕಾರದ ಮೂಲಗಳು ತಿಳಿಸಿವೆ.<br /> <br /> ಶೇ 25ರ ಮಾರಾಟ ತೆರಿಗೆಯನ್ನು ಇಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೇ ಇದ್ದು, ಆ ಕುರಿತು ಚಿಂತನೆ ನಡೆಸುವ ಇಂಗಿತವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>