<p><strong>ಬೆಂಗಳೂರು: </strong>ರಾಜ್ಯದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ, ಆದಷ್ಟು ಬೇಗ ಬಹುಮತ ಸಾಬೀತು ಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕೇಂದ್ರ ಸಚಿವರುಗಳಾದ ಅನಂತಕುಮಾರ್, ಸದಾನಂದ ಗೌಡ ಹಾಗೂ ಇತರ ಮುಖಂಡರೊಂದಿಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಧನ್ಯವಾದ ಹೇಳಿದರು.</p>.<p>ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಆದರೆ ಅಷ್ಟು ದಿನಗಳ ಅಗತ್ಯವಿಲ್ಲ ಎಂದ ಯಡಿಯೂರಪ್ಪ ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಸಿದ್ದಗಂಗಾ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.</p>.<p><strong>ಮೋದಿ ಕನಸು ನನಸಾಗಿಸುವ ಸಂಕಲ್ಷ</strong></p>.<p>ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವ ಮೋದಿ ಕನಸನ್ನು ಸಾಕಾರಗೊಳಿಸಲಿದ್ದೇವೆ. ಮೋದಿ ಹಾಗೂ ಅಮಿತ್ ಶಾ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿಯಿದೆ.</p>.<p>ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳನ್ನೂ ಗೆಲ್ಲುವ ಸಂಕಲ್ಪ ನಮ್ಮದು ಎಂದು ಹೇಳಿದರು.</p>.<p><strong>ಸೋತ ಅಭ್ಯರ್ಥಿಗಳಿಗೆ ಅಭಯ</strong></p>.<p>ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳು ನೊಂದುಕೊಳ್ಳುವುದು ಬೇಡ. ಸರ್ಕಾರ ಸದಾ ನಿಮ್ಮೊಡನಿದೆ. ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ಕರೆ ನೀಡಿ ಕಾರ್ಯಕರ್ತರನ್ನೂ ಅಭಿನಂದಿಸಿದರು.</p>.<p><strong>ಕಾಂಗ್ರೆಸ್–ಜೆಡಿಎಸ್ ವಿರುದ್ಧ ವಾಗ್ದಾಳಿ</strong></p>.<p>ಕಾಂಗ್ರೆಸ್–ಜೆಡಿಎಸ್ನವರಿಗೆ ಚುನಾವಣೆಯಲ್ಲಿ ಜನರೇ ಉತ್ತರಿಸಿದ್ದಾರೆ. ಅವರಿಗೆ ಬಿಜೆಪಿ ಅಧಿಕಾರಕ್ಕೇರುವುದನ್ನು ಸಹಿಸಲು ಆಗುತ್ತಿಲ್ಲ. ಸಿದ್ದರಾಮಯ್ಯಗೆ ಚಾಮುಂಡೇಶ್ವರಿಯಲ್ಲಿ ಬಂದ ಸ್ಥಿತಿಯೇ ಚಾದಾಮಿಯಲ್ಲೂ ಬರುತ್ತಿತ್ತು ಎಂದು ವಾಗ್ದಾಳಿ ನಡೆಸಿದರು.</p>.<p><strong>ಸಾಲಮನ್ನಾ ಮುಂದೂಡಿಕೆ</strong></p>.<p>ಸಹಾಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲ ಮನ್ನಾ ವಿಚಾರವನ್ನು ಅನಿವಾರ್ಯವಾಗಿ 2–3 ದಿನಗಳವರೆಗೆ ಮುಂದೂಡಲಾಗಿದೆ. ಆದರೆ ನಾವು ನೀಡಿದ್ದ ಭರವಸೆಗೆ ಬದ್ದರಾಗಿದ್ದೇವೆ ಎಂದು ಹೇಳಿದರು.</p>.<p>ಡಾಲರ್ಸ್ ಕಾಲೋನಿಯಲ್ಲಿನ ನಿವಾಸದಿಂದ ಪಕ್ಷದ ಕಚೇರಿಗೆ ಬಂದ ಯಡಿಯೂರಪ್ಪ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ, ಆದಷ್ಟು ಬೇಗ ಬಹುಮತ ಸಾಬೀತು ಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕೇಂದ್ರ ಸಚಿವರುಗಳಾದ ಅನಂತಕುಮಾರ್, ಸದಾನಂದ ಗೌಡ ಹಾಗೂ ಇತರ ಮುಖಂಡರೊಂದಿಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಧನ್ಯವಾದ ಹೇಳಿದರು.</p>.<p>ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಆದರೆ ಅಷ್ಟು ದಿನಗಳ ಅಗತ್ಯವಿಲ್ಲ ಎಂದ ಯಡಿಯೂರಪ್ಪ ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಸಿದ್ದಗಂಗಾ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.</p>.<p><strong>ಮೋದಿ ಕನಸು ನನಸಾಗಿಸುವ ಸಂಕಲ್ಷ</strong></p>.<p>ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವ ಮೋದಿ ಕನಸನ್ನು ಸಾಕಾರಗೊಳಿಸಲಿದ್ದೇವೆ. ಮೋದಿ ಹಾಗೂ ಅಮಿತ್ ಶಾ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿಯಿದೆ.</p>.<p>ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳನ್ನೂ ಗೆಲ್ಲುವ ಸಂಕಲ್ಪ ನಮ್ಮದು ಎಂದು ಹೇಳಿದರು.</p>.<p><strong>ಸೋತ ಅಭ್ಯರ್ಥಿಗಳಿಗೆ ಅಭಯ</strong></p>.<p>ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳು ನೊಂದುಕೊಳ್ಳುವುದು ಬೇಡ. ಸರ್ಕಾರ ಸದಾ ನಿಮ್ಮೊಡನಿದೆ. ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ಕರೆ ನೀಡಿ ಕಾರ್ಯಕರ್ತರನ್ನೂ ಅಭಿನಂದಿಸಿದರು.</p>.<p><strong>ಕಾಂಗ್ರೆಸ್–ಜೆಡಿಎಸ್ ವಿರುದ್ಧ ವಾಗ್ದಾಳಿ</strong></p>.<p>ಕಾಂಗ್ರೆಸ್–ಜೆಡಿಎಸ್ನವರಿಗೆ ಚುನಾವಣೆಯಲ್ಲಿ ಜನರೇ ಉತ್ತರಿಸಿದ್ದಾರೆ. ಅವರಿಗೆ ಬಿಜೆಪಿ ಅಧಿಕಾರಕ್ಕೇರುವುದನ್ನು ಸಹಿಸಲು ಆಗುತ್ತಿಲ್ಲ. ಸಿದ್ದರಾಮಯ್ಯಗೆ ಚಾಮುಂಡೇಶ್ವರಿಯಲ್ಲಿ ಬಂದ ಸ್ಥಿತಿಯೇ ಚಾದಾಮಿಯಲ್ಲೂ ಬರುತ್ತಿತ್ತು ಎಂದು ವಾಗ್ದಾಳಿ ನಡೆಸಿದರು.</p>.<p><strong>ಸಾಲಮನ್ನಾ ಮುಂದೂಡಿಕೆ</strong></p>.<p>ಸಹಾಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲ ಮನ್ನಾ ವಿಚಾರವನ್ನು ಅನಿವಾರ್ಯವಾಗಿ 2–3 ದಿನಗಳವರೆಗೆ ಮುಂದೂಡಲಾಗಿದೆ. ಆದರೆ ನಾವು ನೀಡಿದ್ದ ಭರವಸೆಗೆ ಬದ್ದರಾಗಿದ್ದೇವೆ ಎಂದು ಹೇಳಿದರು.</p>.<p>ಡಾಲರ್ಸ್ ಕಾಲೋನಿಯಲ್ಲಿನ ನಿವಾಸದಿಂದ ಪಕ್ಷದ ಕಚೇರಿಗೆ ಬಂದ ಯಡಿಯೂರಪ್ಪ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>