ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಗೆ ಕಾಂಗ್ರೆಸ್‌ ಅಡವಿಟ್ಟಿದ್ದೀರಾ: ವಿಶ್ವನಾಥ್‌

Last Updated 25 ಮೇ 2017, 19:30 IST
ಅಕ್ಷರ ಗಾತ್ರ
ಮೈಸೂರು: ‘ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ ಬೆಂಗಳೂರಿನಲ್ಲಿ ನಡೆಸಿದ ಪಕ್ಷದ ಸಭೆಗೆ ನನ್ನನ್ನು ಆಹ್ವಾನಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರಂತೆ. ಮುಖ್ಯಮಂತ್ರಿಗೇನು ಕಾಂಗ್ರೆಸ್‌ ಅಡವಿಟ್ಟಿದ್ದೀರಾ?’ ಎಂದು ಪಕ್ಷದ ಮುಖಂಡ ಎಚ್‌.ವಿಶ್ವನಾಥ್‌ ಇಲ್ಲಿ ಗುರುವಾರ ಪ್ರಶ್ನಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿ, ‘ಸಭೆಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ನನಗೆ ದೂರವಾಣಿ ಕರೆ ಮಾಡಿದರು. ನನ್ನನ್ನು ಸಭೆಗೆ ಕರೆಯದಂತೆ ಸಿದ್ದರಾಮಯ್ಯ ಅವರೇ ಸೂಚಿಸಿದ್ದರು ಎಂದು ತಿಳಿಸಿದರು. ಆಗ ಅವರಿಗೂ ಈ ಪ್ರಶ್ನೆ ಕೇಳಿದೆ’ ಎಂದರು.
 
‘ಜಿಲ್ಲಾ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಗೆ ನನ್ನನ್ನು ಏಕೆ ಕರೆದಿಲ್ಲ ಎಂದು ಬಾಗಿಲ ಬಳಿ ನಿಂತು ಗಲಾಟೆ ಮಾಡಬೇಕೇ? ಹಿರಿಯ ಮುಖಂಡರನ್ನು ಗೌರವದಿಂದ ನಡೆಸಿಕೊಳ್ಳುವುದು ಅವರ ಜವಾಬ್ದಾರಿ’ ಎಂದು ಅವರು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT