ಪಾಲಿಕೆಗೆ ಬಂದ 20ಕ್ಕೂ ಹೆಚ್ಚು ಕಾರ್ಯಕರ್ತರು ಮೇಯರ್ ಶರಣಕುಮಾರ ಮೋದಿ ಅವರ ಕಾರನ್ನು ಅಡ್ಡಗಟ್ಟಿದರು. ಆಗ ಕೆಳಗಿಳಿದ ಮೇಯರ್ ಮಾತುಕತೆಗೆ ಮುಂದಾದರು. ಈ ವೇಳೆ ಪ್ರತಿಭಟನಾಕಾರರು ಬಣ್ಣ ಎರಚಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಹೊತ್ತು ಆತಂಕ ನಿರ್ಮಾಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.