ಮೈಸೂರು: ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವ ‘ರಾಷ್ಟ್ರೀಯ ಶೌರ್ಯ ಪ್ರಶಸ್ತಿ’ಗೆ ಇಲ್ಲಿನ ಗದ್ದಿಗೆ ರಸ್ತೆಯಲ್ಲಿರುವ ನವೋದಯ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಎಸ್.ಎಸ್. ಮನೋಜ್ ಆಯ್ಕೆಯಾಗಿದ್ದಾರೆ.
2012ರ ಸೆ. 2ರಂದು ಶ್ರೀರಂಗಪಟ್ಟಣದ ಕಾವೇರಿ ನದಿಗೆ ಕಾಲು ಜಾರಿ ಬಿದ್ದ ಮಂಚಮ್ಮ ಎಂಬ ಅಂಗವಿಕಲ ಮಹಿಳೆಯನ್ನು ರಕ್ಷಿಸಿದ್ದ ಈತನಿಗೆ ರಾಜ್ಯ ಸರ್ಕಾರ ‘ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿ’ ನೀಡಿ ಗೌರವಿಸಿದೆ.
ಪ್ರಶಸ್ತಿ ಪತ್ರ, ಒಂದು ಚಿನ್ನದ ಪದಕ ಹಾಗೂ ಒಂದು ಲಕ್ಷ ರೂ. ನಗದು ಒಳಗೊಂಡಿದೆ. ಗಣರಾಜ್ಯೋತ್ಸವದಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಡಾ.ಮನಮೋಹನ ಸಿಂಗ್ ಪದಕ ವಿತರಣೆ ಮಾಡಲಿದ್ದಾರೆ.