<p>ಮೈಸೂರು: ತಾಲ್ಲೂಕಿನ ಚಿಕ್ಕನಹಳ್ಳಿ ರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಸಿನಕೆರೆ ಬಳಿ ಭಾನುವಾರ ಚಿರತೆಯೊಂದು ಸೆರೆ ಸಿಕ್ಕಿದ್ದ ಬೆನ್ನ ಹಿಂದೆಯೇ ನಗರದ ಬಿಇಎಂಎಲ್ ಕಾರ್ಖಾನೆ ಆವರಣದಲ್ಲಿ ಸೋಮವಾರ ಮತ್ತೊಂದು ಚಿರತೆಯನ್ನು ಸೆರೆ ಹಿಡಿಯಲಾಯಿತು.<br /> <br /> ಬಿಇಎಂಎಲ್ ಕಾರ್ಖಾನೆ ಆವರಣದಲ್ಲಿ ಇರಿಸಲಾಗಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಸಿಕ್ಕಿಬಿದ್ದಿದೆ. ಚಿರತೆ ಆಗಾಗ್ಗೆ ಪ್ರತ್ಯಕ್ಷವಾಗುತ್ತಿರುವ ಬಗ್ಗೆ ಬಿಇಎಂಎಲ್ ಕಾರ್ಖಾನೆ ನೌಕರರು ದೂರಿದ್ದರು. <br /> <br /> ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಖಾನೆ ಆವರಣದಲ್ಲಿ ಬೋನನ್ನು ಇರಿಸಿ ನಾಯಿಯೊಂದನ್ನು ಬಿಟ್ಟಿದ್ದರು. ಆಹಾರ ಅರಸಿ ಬಂದಿದ್ದ ಚಿರತೆ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಬೋನಿಗೆ ಬಿದ್ದಿದೆ.<br /> ಎಸಿಎಫ್ ದೊರೆಸ್ವಾಮಿ, ಅರಣ್ಯಾಧಿಕಾರಿ ಸೋಮಶೆಟ್ಟಿ ಸ್ಥಳಕ್ಕೆ ಆಗಮಿಸಿದರು. ಬಳಿಕ ಬೋನನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸಿ ಚಿರತೆಯನ್ನು ಬಿಡಲಾಯಿತು. <br /> <br /> ಮರಟಿಕ್ಯಾತನಹಳ್ಳಿ: ಮತ್ತೊಂದು ಘಟನೆಯಲ್ಲಿ ಬೋಗಾದಿ ಗ್ರಾಮದ ಮರಟಿಕ್ಯಾತನಹಳ್ಳಿಯ ತೆರೆದ ಒಣ ಬಾವಿಯೊಂದರಲ್ಲಿ ಚಿರತೆ ಸೋಮವಾರ ಮುಂಜಾನೆ ಬಿದ್ದಿತ್ತು. ಆಹಾರ ಅರಸಿ ಬಂದಿದ್ದ ಚಿರತೆ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿತ್ತು ಎನ್ನಲಾಗಿದೆ. <br /> <br /> ಬೆಳಿಗ್ಗೆ 7.30ರ ಸುಮಾರಿನಲ್ಲಿ ತೆರೆದ ಬಾವಿಯಲ್ಲಿ ಚಿರತೆ ಇದ್ದುದ್ದನ್ನು ಕಂಡ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರು. ವನ್ಯಜೀವಿ ರಕ್ಷಣಾ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿತು. ಅಷ್ಟರಲ್ಲಾಗಲೆ ಚಿರತೆ ಬಾವಿಯಿಂದ ತಪ್ಪಿಸಿಕೊಂಡು ಪರಾರಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ತಾಲ್ಲೂಕಿನ ಚಿಕ್ಕನಹಳ್ಳಿ ರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಸಿನಕೆರೆ ಬಳಿ ಭಾನುವಾರ ಚಿರತೆಯೊಂದು ಸೆರೆ ಸಿಕ್ಕಿದ್ದ ಬೆನ್ನ ಹಿಂದೆಯೇ ನಗರದ ಬಿಇಎಂಎಲ್ ಕಾರ್ಖಾನೆ ಆವರಣದಲ್ಲಿ ಸೋಮವಾರ ಮತ್ತೊಂದು ಚಿರತೆಯನ್ನು ಸೆರೆ ಹಿಡಿಯಲಾಯಿತು.<br /> <br /> ಬಿಇಎಂಎಲ್ ಕಾರ್ಖಾನೆ ಆವರಣದಲ್ಲಿ ಇರಿಸಲಾಗಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಸಿಕ್ಕಿಬಿದ್ದಿದೆ. ಚಿರತೆ ಆಗಾಗ್ಗೆ ಪ್ರತ್ಯಕ್ಷವಾಗುತ್ತಿರುವ ಬಗ್ಗೆ ಬಿಇಎಂಎಲ್ ಕಾರ್ಖಾನೆ ನೌಕರರು ದೂರಿದ್ದರು. <br /> <br /> ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಖಾನೆ ಆವರಣದಲ್ಲಿ ಬೋನನ್ನು ಇರಿಸಿ ನಾಯಿಯೊಂದನ್ನು ಬಿಟ್ಟಿದ್ದರು. ಆಹಾರ ಅರಸಿ ಬಂದಿದ್ದ ಚಿರತೆ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಬೋನಿಗೆ ಬಿದ್ದಿದೆ.<br /> ಎಸಿಎಫ್ ದೊರೆಸ್ವಾಮಿ, ಅರಣ್ಯಾಧಿಕಾರಿ ಸೋಮಶೆಟ್ಟಿ ಸ್ಥಳಕ್ಕೆ ಆಗಮಿಸಿದರು. ಬಳಿಕ ಬೋನನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸಿ ಚಿರತೆಯನ್ನು ಬಿಡಲಾಯಿತು. <br /> <br /> ಮರಟಿಕ್ಯಾತನಹಳ್ಳಿ: ಮತ್ತೊಂದು ಘಟನೆಯಲ್ಲಿ ಬೋಗಾದಿ ಗ್ರಾಮದ ಮರಟಿಕ್ಯಾತನಹಳ್ಳಿಯ ತೆರೆದ ಒಣ ಬಾವಿಯೊಂದರಲ್ಲಿ ಚಿರತೆ ಸೋಮವಾರ ಮುಂಜಾನೆ ಬಿದ್ದಿತ್ತು. ಆಹಾರ ಅರಸಿ ಬಂದಿದ್ದ ಚಿರತೆ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿತ್ತು ಎನ್ನಲಾಗಿದೆ. <br /> <br /> ಬೆಳಿಗ್ಗೆ 7.30ರ ಸುಮಾರಿನಲ್ಲಿ ತೆರೆದ ಬಾವಿಯಲ್ಲಿ ಚಿರತೆ ಇದ್ದುದ್ದನ್ನು ಕಂಡ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರು. ವನ್ಯಜೀವಿ ರಕ್ಷಣಾ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿತು. ಅಷ್ಟರಲ್ಲಾಗಲೆ ಚಿರತೆ ಬಾವಿಯಿಂದ ತಪ್ಪಿಸಿಕೊಂಡು ಪರಾರಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>