ಸಮಾವೇಶ ಉದ್ಘಾಟಿಸಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ‘ಶಿಕ್ಷಣ ಯಾವತ್ತೂ ಮೌಲ್ಯಾಧಾರಿತವಾಗಿರಬೇಕು. ಆದರೆ ಇವತ್ತು ನಮ್ಮ ಶಿಕ್ಷಣ ವ್ಯವಸ್ಥೆ ಭೌತಿಕಮಯವಾಗಿದೆ. ಹೀಗಾಗಿಯೇ ಅದು ಮನಸು ಮತ್ತು ಹೃದಯ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಭಗವಾನ್ ಸತ್ಯಸಾಯಿ ಬಾಬಾ ಅವರು ರೂಪಿಸಿದ ಮೌಲ್ಯಾಧಾರಿತ ಶಿಕ್ಷಣದ ಪರಿಕಲ್ಪನೆಯನ್ನು ನಾವೆಲ್ಲ ಅಳವಡಿಸಿಕೊಂಡು, ಪಾಲಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.