<p><strong>ಬೆಂಗಳೂರು: </strong>ತುಮಕೂರಿನ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿನ ಐತಿಹಾಸಿಕ ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳಲು ಹೈಕೋರ್ಟ್ ಸರ್ಕಾರಕ್ಕೆ ಗುರುವಾರ ಆದೇಶಿಸಿದೆ.<br /> <br /> ದೇವಾಲಯದ ಕಟ್ಟಡ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಹಲವಾರು ಭಕ್ತರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> ಈ ಆದೇಶದ ಹಿನ್ನೆಲೆಯಲ್ಲಿ, 16 ಮತ್ತು 17ನೇ ಶತಮಾನದಷ್ಟು ಹಳೆಯದಾಗಿರುವ ಈ ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳುವುದಾಗಿ ಕೋರ್ಟ್ನಲ್ಲಿ ಹಾಜರಿದ್ದ ಕೇಂದ್ರ ಸರ್ವೇಕ್ಷಣಾ ನಿರ್ದೇಶನಾಲಯದ ಅಧಿಕಾರಿ ಮಂಜುನಾಥ ಅವರು ಒಪ್ಪಿಕೊಂಡರು. <br /> <br /> ಕಟ್ಟಡ ನೆಲಸಮ ಕುರಿತಾಗಿ ಪರಿಶೀಲನೆ ನಡೆಸಲು ರಾಜ್ಯದ ಪುರಾತತ್ವ ಇಲಾಖೆಯ ಅಧಿಕಾರಿಯೊಬ್ಬರ ಸಹಕಾರ ಪಡೆದುಕೊಳ್ಳುವಂತೆ ಸರ್ಕಾರದ ಪರ ವಕೀಲರಿಗೆ ಪೀಠ ಸೂಚಿಸಿತು.<br /> <br /> ದೇವಾಲಯದ ಮರು ನಿರ್ಮಾಣದ ಕುರಿತ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಲು ವಿಫಲವಾಗಿದ್ದ ನಿರ್ದೇಶನಾಲಯವನ್ನು ಕಳೆದ ಬಾರಿ ವಿಚಾರಣೆ ವೇಳೆ ಕೋರ್ಟ್ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿತ್ತು.<br /> ಬಿಎಸ್ವೈ ಇನ್ನೊಂದು <br /> <br /> <strong>ಅರ್ಜಿ: ನೋಟಿಸ್</strong><br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇನ್ನೊಂದು ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 2 ಮತ್ತು 3ನೇ ಖಾಸಗಿ ದೂರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ವಿಚಾರಣೆಗೆ ಅಂಗೀಕರಿಸಿರುವುದನ್ನು ಅವರು ಪ್ರಶ್ನಿಸಿದ್ದಾರೆ. <br /> <br /> ರಾಜ್ಯಪಾಲರು ದೂರು ದಾಖಲು ಮಾಡಲು ಕೆಲವು ಪ್ರಕರಣಗಳಿಗೆ ಅನುಮತಿ ನೀಡದಿದ್ದರೂ ಅದನ್ನು ಕೋರ್ಟ್ ವಿಚಾರಣೆಗೆ ಅಂಗೀಕರಿಸಿರುವುದು ಸರಿಯಲ್ಲ ಎನ್ನುವುದು ಅವರ ವಾದ. ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿವಾದಿ ಬಾಷಾ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಚಾರಣೆ ಮುಂದೂಡಿದರು.<br /> <br /> <strong>ಪರೀಕ್ಷೆ ತಡೆಗೆ ನಕಾರ</strong><br /> ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಸುಮಾರು 439 ಕಾಲೇಜುಗಳಲ್ಲಿ ಇದೇ 19ರಿಂದ ಆರಂಭಗೊಂಡ ಪ್ರಾಯೋಗಿಕ ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. <br /> <br /> ಪರೀಕ್ಷೆಯು ನಿಯಮಾನುಸಾರ ನಡೆಯುತ್ತಿಲ್ಲ ಎಂದು ದೂರಿ ಶ್ರೀಲಂಕಾ ಮೂಲದ ವಿದ್ಯಾರ್ಥಿನಿ ಎನ್. ರಂಡಿಕಾ ಹಾಗೂ ಇತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ವಜಾಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತುಮಕೂರಿನ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿನ ಐತಿಹಾಸಿಕ ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳಲು ಹೈಕೋರ್ಟ್ ಸರ್ಕಾರಕ್ಕೆ ಗುರುವಾರ ಆದೇಶಿಸಿದೆ.<br /> <br /> ದೇವಾಲಯದ ಕಟ್ಟಡ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಹಲವಾರು ಭಕ್ತರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.<br /> <br /> ಈ ಆದೇಶದ ಹಿನ್ನೆಲೆಯಲ್ಲಿ, 16 ಮತ್ತು 17ನೇ ಶತಮಾನದಷ್ಟು ಹಳೆಯದಾಗಿರುವ ಈ ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳುವುದಾಗಿ ಕೋರ್ಟ್ನಲ್ಲಿ ಹಾಜರಿದ್ದ ಕೇಂದ್ರ ಸರ್ವೇಕ್ಷಣಾ ನಿರ್ದೇಶನಾಲಯದ ಅಧಿಕಾರಿ ಮಂಜುನಾಥ ಅವರು ಒಪ್ಪಿಕೊಂಡರು. <br /> <br /> ಕಟ್ಟಡ ನೆಲಸಮ ಕುರಿತಾಗಿ ಪರಿಶೀಲನೆ ನಡೆಸಲು ರಾಜ್ಯದ ಪುರಾತತ್ವ ಇಲಾಖೆಯ ಅಧಿಕಾರಿಯೊಬ್ಬರ ಸಹಕಾರ ಪಡೆದುಕೊಳ್ಳುವಂತೆ ಸರ್ಕಾರದ ಪರ ವಕೀಲರಿಗೆ ಪೀಠ ಸೂಚಿಸಿತು.<br /> <br /> ದೇವಾಲಯದ ಮರು ನಿರ್ಮಾಣದ ಕುರಿತ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಲು ವಿಫಲವಾಗಿದ್ದ ನಿರ್ದೇಶನಾಲಯವನ್ನು ಕಳೆದ ಬಾರಿ ವಿಚಾರಣೆ ವೇಳೆ ಕೋರ್ಟ್ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿತ್ತು.<br /> ಬಿಎಸ್ವೈ ಇನ್ನೊಂದು <br /> <br /> <strong>ಅರ್ಜಿ: ನೋಟಿಸ್</strong><br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇನ್ನೊಂದು ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 2 ಮತ್ತು 3ನೇ ಖಾಸಗಿ ದೂರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ವಿಚಾರಣೆಗೆ ಅಂಗೀಕರಿಸಿರುವುದನ್ನು ಅವರು ಪ್ರಶ್ನಿಸಿದ್ದಾರೆ. <br /> <br /> ರಾಜ್ಯಪಾಲರು ದೂರು ದಾಖಲು ಮಾಡಲು ಕೆಲವು ಪ್ರಕರಣಗಳಿಗೆ ಅನುಮತಿ ನೀಡದಿದ್ದರೂ ಅದನ್ನು ಕೋರ್ಟ್ ವಿಚಾರಣೆಗೆ ಅಂಗೀಕರಿಸಿರುವುದು ಸರಿಯಲ್ಲ ಎನ್ನುವುದು ಅವರ ವಾದ. ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿವಾದಿ ಬಾಷಾ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಚಾರಣೆ ಮುಂದೂಡಿದರು.<br /> <br /> <strong>ಪರೀಕ್ಷೆ ತಡೆಗೆ ನಕಾರ</strong><br /> ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಸುಮಾರು 439 ಕಾಲೇಜುಗಳಲ್ಲಿ ಇದೇ 19ರಿಂದ ಆರಂಭಗೊಂಡ ಪ್ರಾಯೋಗಿಕ ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. <br /> <br /> ಪರೀಕ್ಷೆಯು ನಿಯಮಾನುಸಾರ ನಡೆಯುತ್ತಿಲ್ಲ ಎಂದು ದೂರಿ ಶ್ರೀಲಂಕಾ ಮೂಲದ ವಿದ್ಯಾರ್ಥಿನಿ ಎನ್. ರಂಡಿಕಾ ಹಾಗೂ ಇತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ವಜಾಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>