‘ಈ ಅವ್ಯವಸ್ಥೆಗೆ ಕಾರಣ ಪತ್ತೆ ಹಚ್ಚಲು ಜಾವಡೇಕರ್ ಬರಲಿದ್ದಾರೆ. ಸಮಾರಂಭದ ಜವಾಬ್ದಾರಿ ಹೊತ್ತಿದ್ದ ಶಾಸಕ ಆರ್. ಅಶೋಕ್ ಹಾಗೂ ಬೆಂಗಳೂರು ನಗರ ವ್ಯಾಪ್ತಿಯ ಸಂಸದರು, ಶಾಸಕರು, ಪಾಲಿಕೆ ಸದಸ್ಯರು ಹಾಗೂ ಮಾಜಿ ಶಾಸಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಅವರಿಗೆ ಸೂಚನೆ ಹೋಗಿದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.