ಬೆಳಿಗ್ಗೆ 11.30ಕ್ಕೆ ನಗರದ ಟಿಪ್ಪುಸುಲ್ತಾನ ಸಂಯುಕ್ತರಂಗ ಸಂಘಟನೆಯು ಬಾಬ್ರಿ ಮಸೀದಿ ಧ್ವಂಸ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿತ್ತು. ಇದೇ ಸಂದರ್ಭದಲ್ಲಿ ರಟ್ಟೆಗೆ ಕಪ್ಪುಕಟ್ಟಿಕೊಂಡಿದ್ದ 30ಕ್ಕೂ ಹೆಚ್ಚು ಮುಸ್ಲಿಂ ಯುವಕರು ಸರ್ಕಾರಿ ಪದವಿ ಕಾಲೇಜು ಕಡೆಯಿಂದ ಚಿತ್ತಾಪುರ ಸಂಪರ್ಕ ರಸ್ತೆ ಪ್ರವೇಶಿಸಿದರು. ನಂತರ ರಸ್ತೆ ಪಕ್ಕದಲ್ಲಿನ ಮುಸ್ಲಿಮರ ಅಂಗಡಿ, ಹೋಟೆಲ್ಗಳನ್ನು ಮಾತ್ರ ಮುಚ್ಚಿಸಿ ಅಘೋಷಿತ ಬಂದ್, ಕರಾಳ ದಿನ ಆಚರಿಸುವಂತೆ ಒತ್ತಾಯಿಸುತ್ತಾ ಸುಭಾಷ್ ವೃತ್ತದ ಕಡೆ ಸಾಗಿದರು.