<p>ಬೆಂಗಳೂರು: `ರಾಜ್ಯ ವಿಧಾನಸಭೆ ಮತ್ತು ಲೋಕಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾಗಬಹುದು~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶನಿವಾರ ಇಲ್ಲಿ ಇಂಗಿತ ವ್ಯಕ್ತಪಡಿಸಿದರು.<br /> <br /> ಪಕ್ಷದ ಮಹಿಳಾ ಮೋರ್ಚಾ ಇದೇ 31ರಂದು ಆಯೋಜಿಸಲಿರುವ `ನಾರಿ ಶಕ್ತಿ ಸಂಗಮ~ ಸಮಾವೇಶಕ್ಕೆ ಪೂರ್ವಭಾವಿಯಾಗಿ ನಗರದ ಅರಮನೆ ಮೈದಾನದಲ್ಲಿ ನಡೆದ ಭೂಮಿ ಪೂಜೆ ಕಾರ್ಯಕ್ರಮ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಸರಣಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. <br /> <br /> `ಡಿ.ವಿ. ಸದಾನಂದಗೌಡರೇ ಈ ಸಲದ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ಯಾವ ಗೊಂದಲವೂ ಇಲ್ಲ. ಉಳಿದ ಅವಧಿಗೂ ಅವರೇ ಮುಖ್ಯಮಂತ್ರಿ~ ಎಂದೂ ಈಶ್ವರಪ್ಪ ತಿಳಿಸಿದರು.<br /> <br /> ಅವಧಿಪೂರ್ವ ಚುನಾವಣೆ ಸಾಧ್ಯತೆಯ ಈ ಹೇಳಿಕೆ ಪಕ್ಷದ ಅಧ್ಯಕ್ಷರಿಂದಲೇ ಬಂದಿರುವುದು ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ನಾಯಕತ್ವದ ವಿಚಾರದಲ್ಲಿ ನೀಡುತ್ತಿರುವ ಗೊಂದಲದ ಹೇಳಿಕೆಗಳಿಗೆ ಕಡಿವಾಣ ಹಾಕಲು ಈಶ್ವರಪ್ಪ ಈ `ಬಾಂಬ್~ ಸಿಡಿಸಿದ್ದಾರೆ ಎಂದು ಪಕ್ಷದ ವಲಯದಲ್ಲಿ ಅರ್ಥೈಸಲಾಗಿದೆ. <br /> <br /> ಭಾನುವಾರ ಸಭೆ: ಈ ನಡುವೆ ಯಡಿಯೂರಪ್ಪ ಬೆಂಬಲಿಗರು ಒತ್ತಡ ತಂತ್ರ ಮುಂದುವರಿಸಿದ್ದಾರೆ. ತಮ್ಮ ಬೇಡಿಕೆಗೆ ಹೈಕಮಾಂಡ್ ಬಗ್ಗದಿದ್ದರೆ ಸಾಮೂಹಿಕ ರಾಜೀನಾಮೆ `ಅಸ್ತ್ರ~ ಬಳಸಲು ಚಿಂತನೆ ನಡೆಸಿದ್ದಾರೆ. <br /> <br /> ಭಾನುವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಜರುಗಲಿರುವ ಆಪ್ತ ಸಚಿವರು, ಶಾಸಕರ ಸಭೆಯಲ್ಲಿ ಈ ಕುರಿತು ಚರ್ಚೆ ಆಗುವ ಸಂಭವ ಇದೆ. <br /> <br /> ಈ ಸಭೆಗೆ ಬರುವಂತೆ ಅವರ ಆಪ್ತ ಸಿದ್ದಲಿಂಗಸ್ವಾಮಿ ಅವರು ಶಾಸಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ 2.30ಕ್ಕೆ ರೇಸ್ಕೋರ್ಸ್ ರಸ್ತೆಯ ನಿವಾಸಕ್ಕೆ ಬರುವಂತೆ ತಿಳಿಸಿದ್ದಾರೆ.<br /> <br /> ಮಂಗಳವಾರದಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆ ವೇಳೆಯೊಳಗೆ ರಾಜ್ಯ ರಾಜಕೀಯದಲ್ಲಿ ಕೆಲ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಅಧಿವೇಶನ ಆರಂಭಕ್ಕೂ ಮುನ್ನವೇ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್ ಇದಕ್ಕೆ ಒಪ್ಪದಿದ್ದರೆ ಅವರು ಬಲ ಪ್ರದರ್ಶನಕ್ಕೂ ಮುಂದಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದ ಕೂಡಲೇ ಮುಂದಿನ ನಡೆ ಕುರಿತು ದೃಢ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ತಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಕೆಲವು ಬೆಂಬಲಿಗರಿಗೆ ಸೂಚಿಸಿದ್ದಾರೆ. <br /> <br /> ಕೆಲವರಿಂದ `ವಚನ~ ಕೂಡ ಪಡೆದಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ಸಮಾವೇಶಕ್ಕೆ ತೆರಳುವಾಗ ರೈಲಿನಲ್ಲಿ ಈ ಎಲ್ಲ ಬೆಳವಣಿಗೆಗಳು ನಡೆದಿವೆ. ಭರವಸೆ ಕೊಟ್ಟವರಲ್ಲಿ ಶಾಸಕರಾದ ನಂದೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್, ಅರವಿಂದ ಲಿಂಬಾವಳಿ ಮತ್ತಿತರರು ಸೇರಿದ್ದಾರೆ ಎಂದು ಗೊತ್ತಾಗಿದೆ. ಶನಿವಾರ ರಾತ್ರಿ ಸಚಿವ ಜಗದೀಶ ಶೆಟ್ಟರ್ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. <br /> <br /> <strong>ಸಿ.ಎಂ ದೆಹಲಿಗೆ:</strong> ಯಡಿಯೂರಪ್ಪ ಅವರು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬೇಸತ್ತಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಈ ಬಗ್ಗೆ ಪಕ್ಷದ ವರಿಷ್ಠರಿಗೆ ದೂರು ನೀಡಲು ಈಶ್ವರಪ್ಪ ಅವರ ಜೊತೆಗೂಡಿ ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನಕ್ಕೂ ಮೊದಲೇ ಗೊಂದಲ ನಿವಾರಿಸಬೇಕು. ಸಾಧ್ಯವಾದರೆ ಈ ಕುರಿತು ವರಿಷ್ಠರಿಂದಲೇ ಹೇಳಿಕೆ ಬರುವಂತೆ ಮಾಡಿ, ಬಜೆಟ್ ಅಧಿವೇಶನಕ್ಕೆ ಹಾದಿ ಸುಗಮ ಮಾಡಿಕೊಳ್ಳಬೇಕು ಎಂದು ಬಯಸಿದ್ದಾರೆ.<br /> <br /> `ಬಿಜೆಪಿಯ ಮುಖ್ಯಮಂತ್ರಿ ಈ ಬಾರಿ ಬಜೆಟ್ ಮಂಡಿಸಲಿದ್ದಾರೆ~ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ವಿ. ಧನಂಜಯ ಕುಮಾರ್ ಇತ್ತೀಚೆಗೆ ನೀಡಿರುವ ಹೇಳಿಕೆ ಕುರಿತು ಈಶ್ವರಪ್ಪ ಕೆಂಡಾಮಂಡಲವಾಗಿದ್ದಾರೆ. `ಧನಂಜಯ ಕುಮಾರ್ ಅಂಥ ಹೇಳಿಕೆ ಏಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ, ಅವರು ಪಕ್ಷದ ವಕ್ತಾರರೂ ಅಲ್ಲ. ಅವರು ನೀಡಿರುವ ಹೇಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ರಾಜ್ಯ ವಿಧಾನಸಭೆ ಮತ್ತು ಲೋಕಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾಗಬಹುದು~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶನಿವಾರ ಇಲ್ಲಿ ಇಂಗಿತ ವ್ಯಕ್ತಪಡಿಸಿದರು.<br /> <br /> ಪಕ್ಷದ ಮಹಿಳಾ ಮೋರ್ಚಾ ಇದೇ 31ರಂದು ಆಯೋಜಿಸಲಿರುವ `ನಾರಿ ಶಕ್ತಿ ಸಂಗಮ~ ಸಮಾವೇಶಕ್ಕೆ ಪೂರ್ವಭಾವಿಯಾಗಿ ನಗರದ ಅರಮನೆ ಮೈದಾನದಲ್ಲಿ ನಡೆದ ಭೂಮಿ ಪೂಜೆ ಕಾರ್ಯಕ್ರಮ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಸರಣಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. <br /> <br /> `ಡಿ.ವಿ. ಸದಾನಂದಗೌಡರೇ ಈ ಸಲದ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ಯಾವ ಗೊಂದಲವೂ ಇಲ್ಲ. ಉಳಿದ ಅವಧಿಗೂ ಅವರೇ ಮುಖ್ಯಮಂತ್ರಿ~ ಎಂದೂ ಈಶ್ವರಪ್ಪ ತಿಳಿಸಿದರು.<br /> <br /> ಅವಧಿಪೂರ್ವ ಚುನಾವಣೆ ಸಾಧ್ಯತೆಯ ಈ ಹೇಳಿಕೆ ಪಕ್ಷದ ಅಧ್ಯಕ್ಷರಿಂದಲೇ ಬಂದಿರುವುದು ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ನಾಯಕತ್ವದ ವಿಚಾರದಲ್ಲಿ ನೀಡುತ್ತಿರುವ ಗೊಂದಲದ ಹೇಳಿಕೆಗಳಿಗೆ ಕಡಿವಾಣ ಹಾಕಲು ಈಶ್ವರಪ್ಪ ಈ `ಬಾಂಬ್~ ಸಿಡಿಸಿದ್ದಾರೆ ಎಂದು ಪಕ್ಷದ ವಲಯದಲ್ಲಿ ಅರ್ಥೈಸಲಾಗಿದೆ. <br /> <br /> ಭಾನುವಾರ ಸಭೆ: ಈ ನಡುವೆ ಯಡಿಯೂರಪ್ಪ ಬೆಂಬಲಿಗರು ಒತ್ತಡ ತಂತ್ರ ಮುಂದುವರಿಸಿದ್ದಾರೆ. ತಮ್ಮ ಬೇಡಿಕೆಗೆ ಹೈಕಮಾಂಡ್ ಬಗ್ಗದಿದ್ದರೆ ಸಾಮೂಹಿಕ ರಾಜೀನಾಮೆ `ಅಸ್ತ್ರ~ ಬಳಸಲು ಚಿಂತನೆ ನಡೆಸಿದ್ದಾರೆ. <br /> <br /> ಭಾನುವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಜರುಗಲಿರುವ ಆಪ್ತ ಸಚಿವರು, ಶಾಸಕರ ಸಭೆಯಲ್ಲಿ ಈ ಕುರಿತು ಚರ್ಚೆ ಆಗುವ ಸಂಭವ ಇದೆ. <br /> <br /> ಈ ಸಭೆಗೆ ಬರುವಂತೆ ಅವರ ಆಪ್ತ ಸಿದ್ದಲಿಂಗಸ್ವಾಮಿ ಅವರು ಶಾಸಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ 2.30ಕ್ಕೆ ರೇಸ್ಕೋರ್ಸ್ ರಸ್ತೆಯ ನಿವಾಸಕ್ಕೆ ಬರುವಂತೆ ತಿಳಿಸಿದ್ದಾರೆ.<br /> <br /> ಮಂಗಳವಾರದಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆ ವೇಳೆಯೊಳಗೆ ರಾಜ್ಯ ರಾಜಕೀಯದಲ್ಲಿ ಕೆಲ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಅಧಿವೇಶನ ಆರಂಭಕ್ಕೂ ಮುನ್ನವೇ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್ ಇದಕ್ಕೆ ಒಪ್ಪದಿದ್ದರೆ ಅವರು ಬಲ ಪ್ರದರ್ಶನಕ್ಕೂ ಮುಂದಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದ ಕೂಡಲೇ ಮುಂದಿನ ನಡೆ ಕುರಿತು ದೃಢ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ತಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಕೆಲವು ಬೆಂಬಲಿಗರಿಗೆ ಸೂಚಿಸಿದ್ದಾರೆ. <br /> <br /> ಕೆಲವರಿಂದ `ವಚನ~ ಕೂಡ ಪಡೆದಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ಸಮಾವೇಶಕ್ಕೆ ತೆರಳುವಾಗ ರೈಲಿನಲ್ಲಿ ಈ ಎಲ್ಲ ಬೆಳವಣಿಗೆಗಳು ನಡೆದಿವೆ. ಭರವಸೆ ಕೊಟ್ಟವರಲ್ಲಿ ಶಾಸಕರಾದ ನಂದೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್, ಅರವಿಂದ ಲಿಂಬಾವಳಿ ಮತ್ತಿತರರು ಸೇರಿದ್ದಾರೆ ಎಂದು ಗೊತ್ತಾಗಿದೆ. ಶನಿವಾರ ರಾತ್ರಿ ಸಚಿವ ಜಗದೀಶ ಶೆಟ್ಟರ್ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. <br /> <br /> <strong>ಸಿ.ಎಂ ದೆಹಲಿಗೆ:</strong> ಯಡಿಯೂರಪ್ಪ ಅವರು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬೇಸತ್ತಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಈ ಬಗ್ಗೆ ಪಕ್ಷದ ವರಿಷ್ಠರಿಗೆ ದೂರು ನೀಡಲು ಈಶ್ವರಪ್ಪ ಅವರ ಜೊತೆಗೂಡಿ ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನಕ್ಕೂ ಮೊದಲೇ ಗೊಂದಲ ನಿವಾರಿಸಬೇಕು. ಸಾಧ್ಯವಾದರೆ ಈ ಕುರಿತು ವರಿಷ್ಠರಿಂದಲೇ ಹೇಳಿಕೆ ಬರುವಂತೆ ಮಾಡಿ, ಬಜೆಟ್ ಅಧಿವೇಶನಕ್ಕೆ ಹಾದಿ ಸುಗಮ ಮಾಡಿಕೊಳ್ಳಬೇಕು ಎಂದು ಬಯಸಿದ್ದಾರೆ.<br /> <br /> `ಬಿಜೆಪಿಯ ಮುಖ್ಯಮಂತ್ರಿ ಈ ಬಾರಿ ಬಜೆಟ್ ಮಂಡಿಸಲಿದ್ದಾರೆ~ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ವಿ. ಧನಂಜಯ ಕುಮಾರ್ ಇತ್ತೀಚೆಗೆ ನೀಡಿರುವ ಹೇಳಿಕೆ ಕುರಿತು ಈಶ್ವರಪ್ಪ ಕೆಂಡಾಮಂಡಲವಾಗಿದ್ದಾರೆ. `ಧನಂಜಯ ಕುಮಾರ್ ಅಂಥ ಹೇಳಿಕೆ ಏಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ, ಅವರು ಪಕ್ಷದ ವಕ್ತಾರರೂ ಅಲ್ಲ. ಅವರು ನೀಡಿರುವ ಹೇಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>