<p><strong>ಮಂಗಳೂರು:</strong> ದೇಶದ ರಕ್ಷಣೆಯ ದೃಷ್ಟಿಯಿಂದ ಪ್ರತಿ ಹಿಂದೂ ವ್ಯಕ್ತಿಯೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.</p>.<p>ನಗರದಲ್ಲಿ ಭಾನುವಾರ ದುರ್ಗಾಸೇನೆ ವತಿಯಿಂದ ನಡೆದ ‘ಮಾತೃ ಪೂಜಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಆಯುಧವೆಂದರೆ, ಪೆನ್ನು, ಪುಸ್ತಕ ಅಥವಾ ವಾಹನಗಳಲ್ಲ. ಕತ್ತಿ, ತಲ್ವಾರ್ಗಳನ್ನು ಆಯುಧ ಎನ್ನುತ್ತಾರೆ. ದೇಶದ ರಕ್ಷಣೆಗಾಗಿ ಪ್ರತಿಯೊಬ್ಬರೂ ಮನೆಯಲ್ಲಿ ಕತ್ತಿ– ತಲ್ವಾರ್ ಇಟ್ಟುಕೊಳ್ಳಬೇಕು. ಯಾವುದೇ ಸಂದಿಗ್ಧ ಪರಿಸ್ಥಿತಿ ಎದುರಾದರೂ ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು’ ಎಂದು ಹೇಳಿದರು.</p>.<p>ಶ್ರೀರಾಮ ದೇವರು ಹುಟ್ಟಿದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಒಂದು ಮಂದಿರವನ್ನು ನಮಗೆ ಕಟ್ಟಲಾಗದೇ ಇದ್ದರೂ, ಮುಸ್ಲಿಮರಿಗೆ ನೂರಾರು ಮಸೀದಿಗಳನ್ನು ಕಟ್ಟಲು ಅವಕಾಶ ಮಾಡಿಕೊಡಲಾಗುತ್ತಿರುವುದು ವಿಷಾದನೀಯ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದೇಶದ ರಕ್ಷಣೆಯ ದೃಷ್ಟಿಯಿಂದ ಪ್ರತಿ ಹಿಂದೂ ವ್ಯಕ್ತಿಯೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.</p>.<p>ನಗರದಲ್ಲಿ ಭಾನುವಾರ ದುರ್ಗಾಸೇನೆ ವತಿಯಿಂದ ನಡೆದ ‘ಮಾತೃ ಪೂಜಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಆಯುಧವೆಂದರೆ, ಪೆನ್ನು, ಪುಸ್ತಕ ಅಥವಾ ವಾಹನಗಳಲ್ಲ. ಕತ್ತಿ, ತಲ್ವಾರ್ಗಳನ್ನು ಆಯುಧ ಎನ್ನುತ್ತಾರೆ. ದೇಶದ ರಕ್ಷಣೆಗಾಗಿ ಪ್ರತಿಯೊಬ್ಬರೂ ಮನೆಯಲ್ಲಿ ಕತ್ತಿ– ತಲ್ವಾರ್ ಇಟ್ಟುಕೊಳ್ಳಬೇಕು. ಯಾವುದೇ ಸಂದಿಗ್ಧ ಪರಿಸ್ಥಿತಿ ಎದುರಾದರೂ ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು’ ಎಂದು ಹೇಳಿದರು.</p>.<p>ಶ್ರೀರಾಮ ದೇವರು ಹುಟ್ಟಿದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಒಂದು ಮಂದಿರವನ್ನು ನಮಗೆ ಕಟ್ಟಲಾಗದೇ ಇದ್ದರೂ, ಮುಸ್ಲಿಮರಿಗೆ ನೂರಾರು ಮಸೀದಿಗಳನ್ನು ಕಟ್ಟಲು ಅವಕಾಶ ಮಾಡಿಕೊಡಲಾಗುತ್ತಿರುವುದು ವಿಷಾದನೀಯ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>