<p><strong>ಬೆಂಗಳೂರು: </strong>‘ರಾಜಕಾರಣಿಗಳನ್ನು ದೂರ ಇಟ್ಟರೆ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿಗೆ ಒಳ್ಳೆಯದು. ಸಮ್ಮೇಳನಗಳಿಗೆ ಸರ್ಕಾರದ ಹಣ ಪಡೆಯಬಾರದು.ಅದಕ್ಕಾಗಿ ಪರಿಷತ್ತು ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಬೇಕಿದೆ’ ಎಂದು 77ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಜಿ.ವೆಂಕಟಸುಬ್ಬಯ್ಯ ಹೇಳಿದರು.<br /> <br /> ಬೆಂಗಳೂರು ವರದಿಗಾರರ ಕೂಟ ಮತ್ತು ಪ್ರೆಸ್ ಕ್ಲಬ್ ಮಂಗಳವಾರ ಜಂಟಿಯಾಗಿ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.‘ಕನ್ನಡಿಗರು ನಿದ್ರೆ ಮಾಡಿದರೆ ಅಪಾಯ ಕಟ್ಟಿಟ್ಟಬುತ್ತಿ. ಕನ್ನಡದ ಉಳಿವು ಮತ್ತು ಬೆಳವಣಿಗೆಗಾಗಿ ಎಲ್ಲ ಕ್ಷೇತ್ರಗಳಲ್ಲೂ ಆಂದೋಲನವೇ ನಡೆಯಬೇಕಿದೆ’ ಎಂದು ಕನ್ನಡಿಗರನ್ನು ಅವರು ಈ ಸಂದರ್ಭದಲ್ಲಿ ಎಚ್ಚರಿಸಿದರು.<br /> <br /> ‘ಕನ್ನಡ ಎಂದರೆ ಭಾಷೆ ಮಾತ್ರವಲ್ಲ; ಗ್ರಾಮೀಣ ಜನರು ಕೃಷಿ ಬಿಟ್ಟು ಬೆಂಗಳೂರಿನಂತಹ ನಗರಗಳಿಗೆ ವಲಸೆ ಬರುತ್ತಿದ್ದಾರೆ. ಕೃಷಿ ಜಮೀನು ಬೀಳು ಬಿಳುತ್ತಿದೆ.ಕುಲಾಂತರಿ ತಳಿಗಳ ಸವಾಲು ಎದುರಾಗಿದೆ. ಅರಿಶಿಣ, ಶುಂಠಿಗೆ ಅಮೆರಿಕದಲ್ಲಿ ಪೇಟೆಂಟ್ ಪಡೆಯುವ ಪ್ರಯತ್ನ ನಡೆದಿದೆ. ಇವೆಲ್ಲವೂ ಕನ್ನಡದ ಸಮಸ್ಯೆಗಳೇ’ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ‘ಕನ್ನಡ ಬದುಕಬೇಕಾದರೆ ವಿಧಾನಸೌಧದಲ್ಲಿ ಕನ್ನಡ ರಾಜ್ಯಭಾರ ಮಾಡಬೇಕು. ಐಎಎಸ್ ಅಧಿಕಾರಿಗಳಾದಿಯಾಗಿ ಎಲ್ಲರೂ ಕನ್ನಡದಲ್ಲೇ ವ್ಯವಹರಿಸಬೇಕು. ಚಿರಂಜೀವಿ ಸಿಂಗ್ ಅವರು ಕನ್ನಡ ಕಲಿತದ್ದಲ್ಲದೇ ತಮ್ಮ ಸಂಸಾರವನ್ನು ಕನ್ನಡಮಯ ಮಾಡಿದರು’ ಎಂದು ಅವರು ತಿಳಿಸಿದರು.<br /> <br /> ಕನ್ನಡದ ಅಳಿವು ಉಳಿವಿನ ಜವಾಬ್ದಾರಿ ಹೆಣ್ಣು ಮಕ್ಕಳ ಮೇಲಿದೆ. ತಾಯಂದಿರು ಮಗುವಿಗೆ ಹಾಲೂಡಿಸುವ ಹಂತದಿಂದಲೇ ಕನ್ನಡ ಕಲಿಸಬೇಕು. ಅವರೇ ಕಲಿಸದೇ ಇದ್ದರೆ ಕನ್ನಡಕ್ಕೆ ಕಷ್ಟ ತಪ್ಪಿದ್ದಲ್ಲ.<br /> <br /> ‘ಈಗಿನ ಸಂದರ್ಭದಲ್ಲಿ ನಾಡಿನ ಜನರು ನೊಂದಿದ್ದಾರೆ. ದಿಕ್ಕೆಟ್ಟು ಹೋಗಿದ್ದಾರೆ. ರಾಜಕೀಯ ಏರುಪೇರುಗಳಿಂದ ಜನ ಒದ್ದಾಡ್ತಾ ಇದಾರೆ. ಅಚ್ಚುಕಟ್ಟಾದ ಆಡಳಿತ ವ್ಯವಸ್ಥೆ ಬರಬೇಕಿದೆ. ಸದ್ಯದ ಸಮಸ್ಯೆಯಿಂದ ಹೊರ ಬರುವ ಸಾಮರ್ಥ್ಯ ರಾಜಕೀಯ ನಿಪುಣರಿಗೆ ಇದೆ’.<br /> <br /> ಕನ್ನಡ ಸಾಹಿತ್ಯ, ಭಾರತದ ಯಾವ ಭಾಷೆಯ ಸಾಹಿತ್ಯಕ್ಕೂ ಕಡಿಮೆ ಇಲ್ಲ. ಎಲ್ಲ ಭಾಷೆಗಳಿಗೆ ಕನ್ನಡದ ಕೃತಿಗಳು ಅನುವಾದಗೊಳ್ಳುತ್ತಿವೆ. ಅನೇಕ ಭಾಷೆಗಳ ಕೃತಿಗಳು ಕನ್ನಡಕ್ಕೆ ಬರುತ್ತಿವೆ. ಹೀಗಾಗಿ ಸಾಹಿತ್ಯ ಸಮ್ಮೇಳನವು ದೇಶದ ಆಸಕ್ತಿಯನ್ನು ಕೆರಳಿಸಿದೆ ಎಂದು ಅವರು ಹೇಳಿದರು.<br /> <br /> ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಲ್ಲೂರು ಪ್ರಸಾದ್, ಸಮ್ಮೇಳನ ಮೆರವಣಿಗೆ ಸಮಿತಿ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಕ್ಲಬ್ ಅಧ್ಯಕ್ಷ ಎಂ.ಎ.ಪೊನ್ನಪ್ಪ, ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಣೈ, ಕೂಟದ ಅಧ್ಯಕ್ಷ ಕೆ.ವಿ.ಪ್ರಭಾಕರ್ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಜಕಾರಣಿಗಳನ್ನು ದೂರ ಇಟ್ಟರೆ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿಗೆ ಒಳ್ಳೆಯದು. ಸಮ್ಮೇಳನಗಳಿಗೆ ಸರ್ಕಾರದ ಹಣ ಪಡೆಯಬಾರದು.ಅದಕ್ಕಾಗಿ ಪರಿಷತ್ತು ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಬೇಕಿದೆ’ ಎಂದು 77ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಜಿ.ವೆಂಕಟಸುಬ್ಬಯ್ಯ ಹೇಳಿದರು.<br /> <br /> ಬೆಂಗಳೂರು ವರದಿಗಾರರ ಕೂಟ ಮತ್ತು ಪ್ರೆಸ್ ಕ್ಲಬ್ ಮಂಗಳವಾರ ಜಂಟಿಯಾಗಿ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.‘ಕನ್ನಡಿಗರು ನಿದ್ರೆ ಮಾಡಿದರೆ ಅಪಾಯ ಕಟ್ಟಿಟ್ಟಬುತ್ತಿ. ಕನ್ನಡದ ಉಳಿವು ಮತ್ತು ಬೆಳವಣಿಗೆಗಾಗಿ ಎಲ್ಲ ಕ್ಷೇತ್ರಗಳಲ್ಲೂ ಆಂದೋಲನವೇ ನಡೆಯಬೇಕಿದೆ’ ಎಂದು ಕನ್ನಡಿಗರನ್ನು ಅವರು ಈ ಸಂದರ್ಭದಲ್ಲಿ ಎಚ್ಚರಿಸಿದರು.<br /> <br /> ‘ಕನ್ನಡ ಎಂದರೆ ಭಾಷೆ ಮಾತ್ರವಲ್ಲ; ಗ್ರಾಮೀಣ ಜನರು ಕೃಷಿ ಬಿಟ್ಟು ಬೆಂಗಳೂರಿನಂತಹ ನಗರಗಳಿಗೆ ವಲಸೆ ಬರುತ್ತಿದ್ದಾರೆ. ಕೃಷಿ ಜಮೀನು ಬೀಳು ಬಿಳುತ್ತಿದೆ.ಕುಲಾಂತರಿ ತಳಿಗಳ ಸವಾಲು ಎದುರಾಗಿದೆ. ಅರಿಶಿಣ, ಶುಂಠಿಗೆ ಅಮೆರಿಕದಲ್ಲಿ ಪೇಟೆಂಟ್ ಪಡೆಯುವ ಪ್ರಯತ್ನ ನಡೆದಿದೆ. ಇವೆಲ್ಲವೂ ಕನ್ನಡದ ಸಮಸ್ಯೆಗಳೇ’ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ‘ಕನ್ನಡ ಬದುಕಬೇಕಾದರೆ ವಿಧಾನಸೌಧದಲ್ಲಿ ಕನ್ನಡ ರಾಜ್ಯಭಾರ ಮಾಡಬೇಕು. ಐಎಎಸ್ ಅಧಿಕಾರಿಗಳಾದಿಯಾಗಿ ಎಲ್ಲರೂ ಕನ್ನಡದಲ್ಲೇ ವ್ಯವಹರಿಸಬೇಕು. ಚಿರಂಜೀವಿ ಸಿಂಗ್ ಅವರು ಕನ್ನಡ ಕಲಿತದ್ದಲ್ಲದೇ ತಮ್ಮ ಸಂಸಾರವನ್ನು ಕನ್ನಡಮಯ ಮಾಡಿದರು’ ಎಂದು ಅವರು ತಿಳಿಸಿದರು.<br /> <br /> ಕನ್ನಡದ ಅಳಿವು ಉಳಿವಿನ ಜವಾಬ್ದಾರಿ ಹೆಣ್ಣು ಮಕ್ಕಳ ಮೇಲಿದೆ. ತಾಯಂದಿರು ಮಗುವಿಗೆ ಹಾಲೂಡಿಸುವ ಹಂತದಿಂದಲೇ ಕನ್ನಡ ಕಲಿಸಬೇಕು. ಅವರೇ ಕಲಿಸದೇ ಇದ್ದರೆ ಕನ್ನಡಕ್ಕೆ ಕಷ್ಟ ತಪ್ಪಿದ್ದಲ್ಲ.<br /> <br /> ‘ಈಗಿನ ಸಂದರ್ಭದಲ್ಲಿ ನಾಡಿನ ಜನರು ನೊಂದಿದ್ದಾರೆ. ದಿಕ್ಕೆಟ್ಟು ಹೋಗಿದ್ದಾರೆ. ರಾಜಕೀಯ ಏರುಪೇರುಗಳಿಂದ ಜನ ಒದ್ದಾಡ್ತಾ ಇದಾರೆ. ಅಚ್ಚುಕಟ್ಟಾದ ಆಡಳಿತ ವ್ಯವಸ್ಥೆ ಬರಬೇಕಿದೆ. ಸದ್ಯದ ಸಮಸ್ಯೆಯಿಂದ ಹೊರ ಬರುವ ಸಾಮರ್ಥ್ಯ ರಾಜಕೀಯ ನಿಪುಣರಿಗೆ ಇದೆ’.<br /> <br /> ಕನ್ನಡ ಸಾಹಿತ್ಯ, ಭಾರತದ ಯಾವ ಭಾಷೆಯ ಸಾಹಿತ್ಯಕ್ಕೂ ಕಡಿಮೆ ಇಲ್ಲ. ಎಲ್ಲ ಭಾಷೆಗಳಿಗೆ ಕನ್ನಡದ ಕೃತಿಗಳು ಅನುವಾದಗೊಳ್ಳುತ್ತಿವೆ. ಅನೇಕ ಭಾಷೆಗಳ ಕೃತಿಗಳು ಕನ್ನಡಕ್ಕೆ ಬರುತ್ತಿವೆ. ಹೀಗಾಗಿ ಸಾಹಿತ್ಯ ಸಮ್ಮೇಳನವು ದೇಶದ ಆಸಕ್ತಿಯನ್ನು ಕೆರಳಿಸಿದೆ ಎಂದು ಅವರು ಹೇಳಿದರು.<br /> <br /> ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಲ್ಲೂರು ಪ್ರಸಾದ್, ಸಮ್ಮೇಳನ ಮೆರವಣಿಗೆ ಸಮಿತಿ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಕ್ಲಬ್ ಅಧ್ಯಕ್ಷ ಎಂ.ಎ.ಪೊನ್ನಪ್ಪ, ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಣೈ, ಕೂಟದ ಅಧ್ಯಕ್ಷ ಕೆ.ವಿ.ಪ್ರಭಾಕರ್ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>