ಬೆಂಗಳೂರು: ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಶುಕ್ರವಾರ ರಾಜೀನಾಮೆ ನೀಡಿದ್ದ ಯಡಿಯೂರಪ್ಪ ಬಣದ 9 ಮಂದಿ ಸಚಿವರು ಸೋಮವಾರ ತಮ್ಮ ರಾಜೀನಾಮೆಗಳನ್ನು ಹಿಂಪಡೆದಿದ್ದಾರೆ.
ಸಂಪುಟದ 9 ಮಂದಿ ಸಚಿವರು ರಾಜೀನಾಮೆ ಪತ್ರಗಳನ್ನು ಮುಖ್ಯಮಂತ್ರಿಗೆ ಸ್ವತಃ ಸಲ್ಲಿಸಿದ್ದರು. ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಅವರ ನೇತೃತ್ವದಲ್ಲಿ ರಾಜೀನಾಮೆ ನೀಡಿದ್ದ ಸಚಿವರು, ನಂತರ ಅದನ್ನು ಸ್ವೀಕರಿಸದಂತೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು.