<p>ನವದೆಹಲಿ: ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡಲು ಹಾಗೂ ಬೆಂಗಳೂರು ನಗರಕ್ಕೆ ಸೂಕ್ತ ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಯೋಜನಾ ಆಯೋಗವು ಸೂಚಿಸಿದೆ.<br /> <br /> ರಾಜ್ಯದ ಯೋಜನಾ ಗಾತ್ರ ನಿರ್ಧರಿಸಲು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೀಗೆ ಹೇಳಿದರು.<br /> <br /> ಬೆಂಗಳೂರಿನ ಮೂಲಭೂತ ಸೌಕರ್ಯದ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿದ ಮೊಂಟೆಕ್ ಸಿಂಗ್, ಐಟಿ ನಗರ ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.<br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರಿದ ಪ್ರದೇಶಗಳ ಅಭಿವೃದ್ಧಿಗಾಗಿ ಸೂಕ್ತ ಯೋಜನೆ ಹಾಕಿಕೊಳ್ಳಬೇಕು; ಆ ಪ್ರದೇಶಗಳಿಗೆ ಕುಡಿಯುವ ನೀರು, ತ್ಯಾಜ್ಯ ನಿರ್ವಹಣಾ ವ್ಯವಸ್ಥೆ, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದರು.<br /> <br /> ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ, ಮುಖ್ಯವಾಗಿ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕದ ಮಟ್ಟ ಕಳಪೆ ಯಾಗಿರುವುದನ್ನು ಪ್ರಸ್ತಾಪಿಸಿದ ಮೊಂಟೆಕ್ ಸಿಂಗ್, ಈ ಪ್ರದೇಶಗಳಲ್ಲಿ ಅಪೌಷ್ಟಿಕತೆಗೆ ಕಡಿವಾಣ ಹಾಕಲು ಸಲಹೆ ನೀಡಿದರು. ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆಯೂ ಅವರು ಹೇಳಿದರು.<br /> <br /> ಯೋಜನಾ ಗಾತ್ರ ಹೆಚ್ಚಳ: ಇದೇ ವೇಳೆ, ಯೋಜನಾ ಆಯೋಗವು 2012-13ನೇ ಸಾಲಿಗೆ ರಾಜ್ಯದ ಯೋಜನಾ ಗಾತ್ರವನ್ನು 42,030 ಕೋಟಿ ರೂ.ಗಳಿಗೆ ನಿಗದಿ ಮಾಡಿದೆ. <br /> <br /> ಕಳೆದ ವರ್ಷದ ಯೋಜನಾ ಗಾತ್ರವಾದ 38,070 ಕೋಟಿ ರೂಪಾಯಿಗೆ ಹೋಲಿಸಿದರೆ ಈ ಬಾರಿ ಶೇ 10.4ರಷ್ಟು ಹೆಚ್ಚಳವಾಗಿದೆ.<br /> <br /> ತನಗೆ ಮೀಸಲಾದ ಹಣವನ್ನು ರಾಜ್ಯ ಬಳಸಿಕೊಳ್ಳುತ್ತಿರುವ ರೀತಿ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ತಂತ್ರಜ್ಞಾನ ಅಳವಡಿಸಿಕೊಂಡು ಆಡಳಿತವನ್ನು ದಕ್ಷಗೊಳಿಸುವ ನಿಟ್ಟಿನಲ್ಲಿ ರಾಜ್ಯವು ಇನ್ನೂ ಹೆಚ್ಚಿನ ಪಾತ್ರ ವಹಿಸಬಹುದು ಎಂದರು.<br /> <br /> ಕೃಷಿ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಗಮನ ಕೇಂದ್ರೀಕರಿಸುವ ಜತೆಗೆ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸಲು ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದರು.<br /> <br /> ರಾಜ್ಯದ ಆರ್ಥಿಕ ಬೆಳವಣಿಗೆಯು ಇತ್ತೀಚೆಗೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಮಟ್ಟಕ್ಕೆ ಇಳಿದಿರುವ ಬಗ್ಗೆಯೂ ಮಾತುಕತೆ ವೇಳೆ ಪ್ರಸ್ತಾಪಿಸಲಾಯಿತು.<br /> <br /> ರಾಜ್ಯವು ಮುಂಚಿನಿಂದಲೂ ಪಂಚ ವಾರ್ಷಿಕ ಯೋಜನೆಗಳಲ್ಲಿ ನಿಗದಿ ಮಾಡಿದ್ದಕಿಂತ ಹೆಚ್ಚಿನ ಹಣವನ್ನು ವ್ಯಯಿಸುತ್ತಿದೆ. 11ನೇ ಪಂಚವಾರ್ಷಿಕ ಯೋಜನೆಯಲ್ಲಿ (2007-12) 1,01,664 ಕೋಟಿ ರೂಪಾಯಿ ನಿಗದಿಯಾಗಿದ್ದರೆ, ರಾಜ್ಯದ ವೆಚ್ಚವು 1,14,152 ಕೋಟಿ ರೂಪಾಯಿ ಮುಟ್ಟುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಈ ಸಂದರ್ಭದಲ್ಲಿ ತಿಳಿಸಿದರು.<br /> <br /> ತೀವ್ರ ಬರವು ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೊಡೆತ ನೀಡಿದ್ದರೆ, ಜಾಗತಿಕ ಆರ್ಥಿಕ ಹಿನ್ನಡೆಯು ಕೈಗಾರಿಕಾ ರಂಗದ ಹಿನ್ನಡೆಗೆ ಕಾರಣವಾಗಿದೆ ಎಂದೂ ಅವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡಲು ಹಾಗೂ ಬೆಂಗಳೂರು ನಗರಕ್ಕೆ ಸೂಕ್ತ ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಯೋಜನಾ ಆಯೋಗವು ಸೂಚಿಸಿದೆ.<br /> <br /> ರಾಜ್ಯದ ಯೋಜನಾ ಗಾತ್ರ ನಿರ್ಧರಿಸಲು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೀಗೆ ಹೇಳಿದರು.<br /> <br /> ಬೆಂಗಳೂರಿನ ಮೂಲಭೂತ ಸೌಕರ್ಯದ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿದ ಮೊಂಟೆಕ್ ಸಿಂಗ್, ಐಟಿ ನಗರ ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.<br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರಿದ ಪ್ರದೇಶಗಳ ಅಭಿವೃದ್ಧಿಗಾಗಿ ಸೂಕ್ತ ಯೋಜನೆ ಹಾಕಿಕೊಳ್ಳಬೇಕು; ಆ ಪ್ರದೇಶಗಳಿಗೆ ಕುಡಿಯುವ ನೀರು, ತ್ಯಾಜ್ಯ ನಿರ್ವಹಣಾ ವ್ಯವಸ್ಥೆ, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದರು.<br /> <br /> ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ, ಮುಖ್ಯವಾಗಿ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕದ ಮಟ್ಟ ಕಳಪೆ ಯಾಗಿರುವುದನ್ನು ಪ್ರಸ್ತಾಪಿಸಿದ ಮೊಂಟೆಕ್ ಸಿಂಗ್, ಈ ಪ್ರದೇಶಗಳಲ್ಲಿ ಅಪೌಷ್ಟಿಕತೆಗೆ ಕಡಿವಾಣ ಹಾಕಲು ಸಲಹೆ ನೀಡಿದರು. ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆಯೂ ಅವರು ಹೇಳಿದರು.<br /> <br /> ಯೋಜನಾ ಗಾತ್ರ ಹೆಚ್ಚಳ: ಇದೇ ವೇಳೆ, ಯೋಜನಾ ಆಯೋಗವು 2012-13ನೇ ಸಾಲಿಗೆ ರಾಜ್ಯದ ಯೋಜನಾ ಗಾತ್ರವನ್ನು 42,030 ಕೋಟಿ ರೂ.ಗಳಿಗೆ ನಿಗದಿ ಮಾಡಿದೆ. <br /> <br /> ಕಳೆದ ವರ್ಷದ ಯೋಜನಾ ಗಾತ್ರವಾದ 38,070 ಕೋಟಿ ರೂಪಾಯಿಗೆ ಹೋಲಿಸಿದರೆ ಈ ಬಾರಿ ಶೇ 10.4ರಷ್ಟು ಹೆಚ್ಚಳವಾಗಿದೆ.<br /> <br /> ತನಗೆ ಮೀಸಲಾದ ಹಣವನ್ನು ರಾಜ್ಯ ಬಳಸಿಕೊಳ್ಳುತ್ತಿರುವ ರೀತಿ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ತಂತ್ರಜ್ಞಾನ ಅಳವಡಿಸಿಕೊಂಡು ಆಡಳಿತವನ್ನು ದಕ್ಷಗೊಳಿಸುವ ನಿಟ್ಟಿನಲ್ಲಿ ರಾಜ್ಯವು ಇನ್ನೂ ಹೆಚ್ಚಿನ ಪಾತ್ರ ವಹಿಸಬಹುದು ಎಂದರು.<br /> <br /> ಕೃಷಿ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಗಮನ ಕೇಂದ್ರೀಕರಿಸುವ ಜತೆಗೆ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸಲು ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದರು.<br /> <br /> ರಾಜ್ಯದ ಆರ್ಥಿಕ ಬೆಳವಣಿಗೆಯು ಇತ್ತೀಚೆಗೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಮಟ್ಟಕ್ಕೆ ಇಳಿದಿರುವ ಬಗ್ಗೆಯೂ ಮಾತುಕತೆ ವೇಳೆ ಪ್ರಸ್ತಾಪಿಸಲಾಯಿತು.<br /> <br /> ರಾಜ್ಯವು ಮುಂಚಿನಿಂದಲೂ ಪಂಚ ವಾರ್ಷಿಕ ಯೋಜನೆಗಳಲ್ಲಿ ನಿಗದಿ ಮಾಡಿದ್ದಕಿಂತ ಹೆಚ್ಚಿನ ಹಣವನ್ನು ವ್ಯಯಿಸುತ್ತಿದೆ. 11ನೇ ಪಂಚವಾರ್ಷಿಕ ಯೋಜನೆಯಲ್ಲಿ (2007-12) 1,01,664 ಕೋಟಿ ರೂಪಾಯಿ ನಿಗದಿಯಾಗಿದ್ದರೆ, ರಾಜ್ಯದ ವೆಚ್ಚವು 1,14,152 ಕೋಟಿ ರೂಪಾಯಿ ಮುಟ್ಟುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಈ ಸಂದರ್ಭದಲ್ಲಿ ತಿಳಿಸಿದರು.<br /> <br /> ತೀವ್ರ ಬರವು ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೊಡೆತ ನೀಡಿದ್ದರೆ, ಜಾಗತಿಕ ಆರ್ಥಿಕ ಹಿನ್ನಡೆಯು ಕೈಗಾರಿಕಾ ರಂಗದ ಹಿನ್ನಡೆಗೆ ಕಾರಣವಾಗಿದೆ ಎಂದೂ ಅವರು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>