<p><strong>ಬೆಂಗಳೂರು</strong>: ಈ ಸಲದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯನ್ನು ಸರ್ಕಾರ ಪುನರ್ ರಚಿಸಿದೆ. ಇದರಲ್ಲಿ ಹಿರಿಯ ಸಾಹಿತಿ ಯು.ಆರ್. ಅನಂತ ಮೂರ್ತಿ, ಕೆ. ಮರುಳಸಿದ್ಧಪ್ಪ ಸೇರಿ ದಂತೆ ಒಟ್ಟು 11 ಜನ ಸದಸ್ಯರಿದ್ದಾರೆ.<br /> <br /> ಪ್ರಶಸ್ತಿಗೆ ಗಣ್ಯರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದ ಸಲಹಾ ಸಮಿತಿ ಯನ್ನು ಸೆಪ್ಟೆಂಬರ್ 20ರಂದೇ ರಚಿಸ ಲಾಗಿತ್ತು. ಇದರಲ್ಲಿ ಹಲವು ಅಕಾಡೆಮಿ ಗಳ ಅಧ್ಯಕ್ಷರು ಪದನಿಮಿತ್ತ ಸದಸ್ಯರಾಗಿ ದ್ದರು. ಆದರೆ ಅವರಿಂದ ಸರ್ಕಾರ ರಾಜೀನಾಮೆ ಪಡೆದಿದ್ದು, ಆ ಹುದ್ದೆಗಳು ಖಾಲಿ ಇವೆ.<br /> <br /> ಹೀಗಾಗಿ, ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯ ದರ್ಶಿ ಸಿದ್ರಾಮಪ್ಪ ತಳವಾರ ತಿಳಿಸಿ ದ್ದಾರೆ. ಹೊಸ ಸಮಿತಿಗೂ ಮುಖ್ಯ ಮಂತ್ರಿಯವರೇ ಅಧ್ಯಕ್ಷರಾಗಿರುತ್ತಾರೆ.<br /> <br /> ಸಮಿತಿಯ ಇತರ ಸದಸ್ಯರು: ಜಿ.ವಿ. ಅಂದಾನಿ, ಹಿ.ಶಿ. ರಾಮಚಂದ್ರೇಗೌಡ, ಸುಕನ್ಯಾ ಮಾರುತಿ, ಕೆ.ಬಿ. ಸಿದ್ಧಯ್ಯ, ಕಾ.ತ. ಚಿಕ್ಕಣ್ಣ, ಡಿ.ಕೆ. ಚೌಟ, ರಾಮ ಕೃಷ್ಣ ಮರಾಠೆ, ಸುರೇಶ್ ಹೆಬ್ಳೀಕರ್, ಡಾ. ಬಿಸಲಯ್ಯ.<br /> <br /> <strong>ಇಂದು ಸಭೆ: </strong>ಸಮಿತಿಯು ಗುರುವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಈ ಸಲದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯನ್ನು ಸರ್ಕಾರ ಪುನರ್ ರಚಿಸಿದೆ. ಇದರಲ್ಲಿ ಹಿರಿಯ ಸಾಹಿತಿ ಯು.ಆರ್. ಅನಂತ ಮೂರ್ತಿ, ಕೆ. ಮರುಳಸಿದ್ಧಪ್ಪ ಸೇರಿ ದಂತೆ ಒಟ್ಟು 11 ಜನ ಸದಸ್ಯರಿದ್ದಾರೆ.<br /> <br /> ಪ್ರಶಸ್ತಿಗೆ ಗಣ್ಯರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದ ಸಲಹಾ ಸಮಿತಿ ಯನ್ನು ಸೆಪ್ಟೆಂಬರ್ 20ರಂದೇ ರಚಿಸ ಲಾಗಿತ್ತು. ಇದರಲ್ಲಿ ಹಲವು ಅಕಾಡೆಮಿ ಗಳ ಅಧ್ಯಕ್ಷರು ಪದನಿಮಿತ್ತ ಸದಸ್ಯರಾಗಿ ದ್ದರು. ಆದರೆ ಅವರಿಂದ ಸರ್ಕಾರ ರಾಜೀನಾಮೆ ಪಡೆದಿದ್ದು, ಆ ಹುದ್ದೆಗಳು ಖಾಲಿ ಇವೆ.<br /> <br /> ಹೀಗಾಗಿ, ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯ ದರ್ಶಿ ಸಿದ್ರಾಮಪ್ಪ ತಳವಾರ ತಿಳಿಸಿ ದ್ದಾರೆ. ಹೊಸ ಸಮಿತಿಗೂ ಮುಖ್ಯ ಮಂತ್ರಿಯವರೇ ಅಧ್ಯಕ್ಷರಾಗಿರುತ್ತಾರೆ.<br /> <br /> ಸಮಿತಿಯ ಇತರ ಸದಸ್ಯರು: ಜಿ.ವಿ. ಅಂದಾನಿ, ಹಿ.ಶಿ. ರಾಮಚಂದ್ರೇಗೌಡ, ಸುಕನ್ಯಾ ಮಾರುತಿ, ಕೆ.ಬಿ. ಸಿದ್ಧಯ್ಯ, ಕಾ.ತ. ಚಿಕ್ಕಣ್ಣ, ಡಿ.ಕೆ. ಚೌಟ, ರಾಮ ಕೃಷ್ಣ ಮರಾಠೆ, ಸುರೇಶ್ ಹೆಬ್ಳೀಕರ್, ಡಾ. ಬಿಸಲಯ್ಯ.<br /> <br /> <strong>ಇಂದು ಸಭೆ: </strong>ಸಮಿತಿಯು ಗುರುವಾರ ಸಭೆ ಸೇರಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>