ಇದರ ನಡುವೆಯೂ ಹಲವು ಆಕಾಂಕ್ಷಿಗಳು ಸಚಿವರು, ಶಾಸಕರ ಪ್ರಭಾವ ಬಳಸಿ ಪ್ರಶಸ್ತಿ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಕೆಲವರಂತೂ ಮುಖ್ಯಮಂತ್ರಿ ಅವರಿಗೇ ದುಂಬಾಲು ಬಿದ್ದಿದ್ದು, ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಪ್ರಶಸ್ತಿಗೆ ಸಾಧಕರ ಪಟ್ಟಿ ಸಿದ್ಧಪಡಿಸಲು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅಧ್ಯಕ್ಷತೆಯಲ್ಲಿ 14 ಜನರ ಸಮಿತಿ ಮುಖ್ಯಮಂತ್ರಿ ರಚನೆ ಮಾಡಿದ್ದಾರೆ.