‘ಮಠ ಬಿಟ್ಟು ಹಿಮಾಲಯಕ್ಕೆ ತೆರಳುವುದಾಗಿ ಶ್ರೀಗಳು ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರ ಬದಲಿಸಿ ಮಠದಲ್ಲಿಯೇ ಮುಂದುವರಿದಿದ್ದಾರೆ. ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಕುರಿತಂತೆ ಮುಖ್ಯ ಕಾರ್ಯದರ್ಶಿ ವಿಚಾರಣೆ ನಡೆಸುತ್ತಿದ್ದಾರೆ. ಆಡಳಿತಾಧಿಕಾರಿ ನೇಮಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗೆ ಶಿಫಾರಸು ಮಾಡಿ ಎಂದು ನಿಯೋಗ ಕೋರಿದೆ’ ಎಂದರು. ‘ಶ್ರೀಗಳ ವಿರುದ್ಧ ಕೇಳಿ ಬಂದ ಅತ್ಯಾಚಾರ ಪ್ರಕರಣದ ಬಗ್ಗೆ ಆರಂಭಿಸಿದ ಸಿಐಡಿ ತನಿಖೆ ಒಂದು ವರ್ಷವಾದರೂ ಮುಕ್ತಾಯವಾಗಿಲ್ಲ. ಈ ಬಗ್ಗೆ ನಿಯೋಗ ಆಕ್ರೋಶ ವ್ಯಕ್ತಪಡಿಸಿದೆ’ ಎಂದು ಅವರು ಹೇಳಿದರು.