‘ಕೃಷ್ಣಾ ಮೇಲ್ದಂಡೆ ಯೋಜನೆಗೆ ಮಾನ್ಯತೆ ದೊರೆತರೆ ಕೇಂದ್ರ ಸರ್ಕಾರದಿಂದ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಅನುದಾನ, ಸಹಾಯ, ಸಹಕಾರ ಸಿಗಲಿದೆ. ಜತೆಗೆ ಕೃಷ್ಣಾ ನದಿ ನೀರು ಹಂಚಿಕೆ ವಿವಾದವು ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಸುತ್ತಿಕೊಂಡಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಇರುವ ಅಡೆತಡೆಗಳೂ ಆದಷ್ಟು ಶೀಘ್ರ ಬಗೆಹರಿಯಲಿವೆ ಎಂಬ ನಿರೀಕ್ಷೆ ಇದೆ’ ಎಂದು ಶಿವಯೋಗಿ ಕಳಸದ ವಿವರಿಸಿದರು.
*
ಈ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ರಾಜ್ಯ ಸರ್ಕಾರದ ಜತೆ ಕೇಂದ್ರ ಸರ್ಕಾರವೂ ಕೈಜೋಡಿಸಬೇಕಿದೆ.
– ಶಿವಯೋಗಿ ಕಳಸದ
ಆಯುಕ್ತ, ಆರ್ ಅಂಡ್ ಆರ್, ಯುಕೆಪಿ