<p><strong>ಮಂಡ್ಯ: </strong> ಜಿಲ್ಲೆಯ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಸತತ ಐದನೇ ದಿನವಾದ ಸೋಮವಾರವೂ ದಾಳಿ ಮುಂದುವರಿಸಿರುವ ಜಿಲ್ಲಾಡಳಿತವು ಇಲ್ಲಿಯವರೆಗೆರೂ1 ಕೋಟಿ ಮೌಲ್ಯದ ಮರಳು ಸೇರಿದಂತೆ ರೂ10 ಕೋಟಿ ಬೆಲೆಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ.<br /> <br /> `ಪ್ರಜಾವಾಣಿ'ಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತ ಸರಣಿ ವರದಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತ ವರದಿ ಪ್ರಕಟವಾದ ನಂತರ ಜಿಲ್ಲಾಡಳಿತವು ಅಕ್ರಮ ಮರಳು ಸಾಗಾಟದ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಆಡಳಿತ ವ್ಯವಸ್ಥೆ ಚುರುಕುಗೊಂಡಿದೆ.</p>.<p>ಕೆ.ಆರ್. ಪೇಟೆ ತಾಲ್ಲೂಕುವೊಂದರಲ್ಲಿಯೇ ರೂ75 ಲಕ್ಷ ಬೆಲೆ ಬಾಳುವ 500 ಲೋಡ್ ಮರಳು,ರೂ6 ಲಕ್ಷ ಮೌಲ್ಯದ ಪೈಪ್,ರೂ2.5 ಲಕ್ಷ ಬೆಲೆಯ ದೋಣಿ,10 ಹಿಟಾಚಿ, 6 ಜೆಸಿಬಿಗಳನ್ನು ವಶಪಡಿಸಿಕೊಳ್ಳಲಾಗಿದೆ.<br /> <br /> ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ ಬಳಿ ವಶಪಡಿಸಿಕೊಂಡಿದ್ದರೂ1.68 ಲಕ್ಷ ಬೆಲೆಯ ಮರಳನ್ನು ಹರಾಜು ಮಾಡಿ ಮಾರಾಟ ಮಾಡಲಾಗಿದೆ.</p>.<p>ಮಳವಳ್ಳಿ ತಾಲ್ಲೂಕಿನ ಪೂರಿಗಾಲಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠ ಭೂಷಣ ಬೊರಸೆ ದಾಳಿಯ ನೇತೃತ್ವ ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong> ಜಿಲ್ಲೆಯ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಸತತ ಐದನೇ ದಿನವಾದ ಸೋಮವಾರವೂ ದಾಳಿ ಮುಂದುವರಿಸಿರುವ ಜಿಲ್ಲಾಡಳಿತವು ಇಲ್ಲಿಯವರೆಗೆರೂ1 ಕೋಟಿ ಮೌಲ್ಯದ ಮರಳು ಸೇರಿದಂತೆ ರೂ10 ಕೋಟಿ ಬೆಲೆಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ.<br /> <br /> `ಪ್ರಜಾವಾಣಿ'ಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತ ಸರಣಿ ವರದಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತ ವರದಿ ಪ್ರಕಟವಾದ ನಂತರ ಜಿಲ್ಲಾಡಳಿತವು ಅಕ್ರಮ ಮರಳು ಸಾಗಾಟದ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಆಡಳಿತ ವ್ಯವಸ್ಥೆ ಚುರುಕುಗೊಂಡಿದೆ.</p>.<p>ಕೆ.ಆರ್. ಪೇಟೆ ತಾಲ್ಲೂಕುವೊಂದರಲ್ಲಿಯೇ ರೂ75 ಲಕ್ಷ ಬೆಲೆ ಬಾಳುವ 500 ಲೋಡ್ ಮರಳು,ರೂ6 ಲಕ್ಷ ಮೌಲ್ಯದ ಪೈಪ್,ರೂ2.5 ಲಕ್ಷ ಬೆಲೆಯ ದೋಣಿ,10 ಹಿಟಾಚಿ, 6 ಜೆಸಿಬಿಗಳನ್ನು ವಶಪಡಿಸಿಕೊಳ್ಳಲಾಗಿದೆ.<br /> <br /> ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ ಬಳಿ ವಶಪಡಿಸಿಕೊಂಡಿದ್ದರೂ1.68 ಲಕ್ಷ ಬೆಲೆಯ ಮರಳನ್ನು ಹರಾಜು ಮಾಡಿ ಮಾರಾಟ ಮಾಡಲಾಗಿದೆ.</p>.<p>ಮಳವಳ್ಳಿ ತಾಲ್ಲೂಕಿನ ಪೂರಿಗಾಲಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠ ಭೂಷಣ ಬೊರಸೆ ದಾಳಿಯ ನೇತೃತ್ವ ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>