<p><strong>ಬೆಂಗಳೂರು:</strong> ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬಂಟ ಮೆಹಫೂಜ್ ಅಲಿಖಾನ್ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 27ರವರೆಗೆ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.<br /> <br /> ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಮಂಗಳವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ಏ.27ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು, ಅಲ್ಲಿಯವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದರು.<br /> <br /> ಖುದ್ದು ಹಾಜರಿಗೆ ಕೋರಿಕೆ: ವಿಚಾರಣೆ ಮುಗಿಯುವ ಹಂತದಲ್ಲಿ ನೇರವಾಗಿ ನ್ಯಾಯಾಧೀಶರ ಜೊತೆ ಮಾತನಾಡಲು ಅವಕಾಶ ನೀಡುವಂತೆ ಜನಾರ್ದನ ರೆಡ್ಡಿ ಮನವಿ ಮಾಡಿದರು. ಅದಕ್ಕೆ ಅವಕಾಶ ಕಲ್ಪಿಸಲಾಯಿತು. ಆಗ, ಏ.27ಕ್ಕೆ ಸುಪ್ರೀಂಕೋರ್ಟ್ನ ಹಿರಿಯ ವಕೀಲ ರಾಂಜೇಠ್ಮಲಾನಿ ತಮ್ಮ ಪರವಾಗಿ ವಾದ ಮಂಡಿಸಲಿದ್ದಾರೆ. <br /> <br /> ಈ ಅವಧಿಯಲ್ಲಿ ತಮ್ಮ ಖುದ್ದು ಹಾಜರಿಗೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಮಾರ್ಚ್ 2ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯನ್ನು ನೆನಪಿಸಿಕೊಂಡ ನ್ಯಾಯಾಧೀಶರು, ಮತ್ತೆ ಇಂತಹ ಘಟನೆಗಳು ಮರುಕಳಿಸಿದರೆ ಎಂಬ ಆತಂಕ ವ್ಯಕ್ತಪಡಿಸಿದರು. <br /> <br /> ಆದರೂ, ಖುದ್ದು ಹಾಜರುಪಡಿಸಲು ವ್ಯವಸ್ಥೆ ಮಾಡುವ ಕೋರಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಬಂಟ ಮೆಹಫೂಜ್ ಅಲಿಖಾನ್ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 27ರವರೆಗೆ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.<br /> <br /> ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ.ಅಂಗಡಿ ಅವರು ಮಂಗಳವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ಏ.27ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಧೀಶರು, ಅಲ್ಲಿಯವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದರು.<br /> <br /> ಖುದ್ದು ಹಾಜರಿಗೆ ಕೋರಿಕೆ: ವಿಚಾರಣೆ ಮುಗಿಯುವ ಹಂತದಲ್ಲಿ ನೇರವಾಗಿ ನ್ಯಾಯಾಧೀಶರ ಜೊತೆ ಮಾತನಾಡಲು ಅವಕಾಶ ನೀಡುವಂತೆ ಜನಾರ್ದನ ರೆಡ್ಡಿ ಮನವಿ ಮಾಡಿದರು. ಅದಕ್ಕೆ ಅವಕಾಶ ಕಲ್ಪಿಸಲಾಯಿತು. ಆಗ, ಏ.27ಕ್ಕೆ ಸುಪ್ರೀಂಕೋರ್ಟ್ನ ಹಿರಿಯ ವಕೀಲ ರಾಂಜೇಠ್ಮಲಾನಿ ತಮ್ಮ ಪರವಾಗಿ ವಾದ ಮಂಡಿಸಲಿದ್ದಾರೆ. <br /> <br /> ಈ ಅವಧಿಯಲ್ಲಿ ತಮ್ಮ ಖುದ್ದು ಹಾಜರಿಗೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಮಾರ್ಚ್ 2ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯನ್ನು ನೆನಪಿಸಿಕೊಂಡ ನ್ಯಾಯಾಧೀಶರು, ಮತ್ತೆ ಇಂತಹ ಘಟನೆಗಳು ಮರುಕಳಿಸಿದರೆ ಎಂಬ ಆತಂಕ ವ್ಯಕ್ತಪಡಿಸಿದರು. <br /> <br /> ಆದರೂ, ಖುದ್ದು ಹಾಜರುಪಡಿಸಲು ವ್ಯವಸ್ಥೆ ಮಾಡುವ ಕೋರಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>