ವಾಣಿಜ್ಯ, ಖಾಸಗಿ ಹಾಗೂ ಗ್ರಾಮೀಣ ಬ್ಯಾಂಕ್ಗಳಲ್ಲಿ ಇದೇ ವರ್ಷದ ಮಾರ್ಚ್ ಅಂತ್ಯದವರೆಗೆ ರಾಜ್ಯದ 28.73 ಲಕ್ಷ ರೈತರು ₹ 42 ಸಾವಿರ ಕೋಟಿ ಬೆಳೆ ಸಾಲ ಪಡೆದಿದ್ದಾರೆ. ಕರ್ನಾಟಕ ಸತತ ಆರು ವರ್ಷಗಳಿಂದ ಬರಗಾಲ ಎದುರಿಸುತ್ತಿದೆ. ಬೆಳೆನಷ್ಟದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಬರಬೇಕು ಎಂದೂ ಅವರು ಪತ್ರದಲ್ಲಿ ಕೋರಿದ್ದಾರೆ.