ಸಭೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೂ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರೂ ಭಾಗವಹಿಸಲಿದ್ದಾರೆ. ರೈತರ ಸಭೆಗೆ ಪ್ರತಿ ಜಿಲ್ಲೆಯಿಂದಲೂ ತಲಾ ನಾಲ್ಕು ಮಂದಿ ಪ್ರಗತಿಪರ ರೈತರನ್ನು ಆಹ್ವಾನಿಸಲಾಗಿದೆ. ಒಟ್ಟು 150 ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸುವರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ಸಹಕಾರ, ಹಣಕಾಸು ಇಲಾಖೆ ಅಧಿಕಾರಿಗಳು ಭಾಗವಹಿಸುವರು.