ಇದನ್ನು ಆಕ್ಷೇಪಿಸಿದ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ’ಸರ್ಕಾರವು ಆಡಳಿತ ನಿರ್ವಹಣೆ ದೃಷ್ಟಿಯಿಂದ ವರ್ಗಾವಣೆ ಮಾಡಿದೆ. ಇದನ್ನು ಅಧಿಕಾರಿಗಳು ಪ್ರಶ್ನೆ ಮಾಡುವುದು ಅಥವಾ ನಾನು ಇಲ್ಲೇ ಮುಂದುವರೆಯುತ್ತೇನೆ ಎಂದು ಹೇಳುವುದು ಕಾನೂನಿಗೆ ವಿರುದ್ಧವಾದುದು. ಆದ್ದರಿಂದ ಅರ್ಜಿ ವಜಾ ಮಾಡಬೇಕು’ ಎಂದು ಕೋರಿದರು.