<p>ಬಾಗಲಕೋಟೆ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳನ್ನು ಶುಕ್ರವಾರ ಡಿಜಿಪಿ ಅಮಾನತುಗೊಳಿಸಿದ್ದಾರೆ.<br /> <br /> ಮುಧೋಳ ಸಿಪಿಐ ಸುರೇಶ ರೆಡ್ಡಿ, ಲೋಕಾಪುರ ಠಾಣೆ ಎಸ್.ಐ. ರಾಮಚಂದ್ರ ಚೌಧರಿ ಮತ್ತು ಕಾನ್ಸ್ಟೇಬಲ್ ಬುದ್ನಿ ಅಮಾನತುಗೊಂಡಿದ್ದಾರೆ.<br /> <br /> ಕಳವು ಮಾಡಲಾದ ಸಿಮೆಂಟ್ ಅನ್ನು ಖರೀದಿಸಿರುವ ಪ್ರಕರಣದಿಂದ ಕೈಬಿಡಲು ಧಾರವಾಡದ ಮಂಜುನಾಥ ಎಂಬುವವರಿಗೆ ಪೊಲೀಸರು ರೂ.3 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು.<br /> <br /> ಈ ಸಂಬಂಧ ಮಂಜುನಾಥ ಅವರಿಂದ ರೂ.2.75 ಲಕ್ಷ ನಗದು ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತರು ಬಂಧಿಸಿದ್ದರು.<br /> <br /> ಲೋಕಾಯುಕ್ತರು ಎಸ್.ಐ ಅವರನ್ನು ಬಂಧಿಸಿ ಕರೆತರುತ್ತಿದ್ದ ಸಂದರ್ಭದಲ್ಲಿ ಎಸ್.ಐ ಸಂಬಂಧಿಕರು ಮತ್ತು ಕೆಲ ಸಾರ್ವಜನಿಕರು ಅಡ್ಡಗಟ್ಟಿ ಲೋಕಾಯುಕ್ತ ವಾಹನದ ಮೇಲೆ ಕಲ್ಲುತೂರಾಟ ನಡೆಸಿದ್ದನ್ನು ನೆನಪಿಸಿಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳನ್ನು ಶುಕ್ರವಾರ ಡಿಜಿಪಿ ಅಮಾನತುಗೊಳಿಸಿದ್ದಾರೆ.<br /> <br /> ಮುಧೋಳ ಸಿಪಿಐ ಸುರೇಶ ರೆಡ್ಡಿ, ಲೋಕಾಪುರ ಠಾಣೆ ಎಸ್.ಐ. ರಾಮಚಂದ್ರ ಚೌಧರಿ ಮತ್ತು ಕಾನ್ಸ್ಟೇಬಲ್ ಬುದ್ನಿ ಅಮಾನತುಗೊಂಡಿದ್ದಾರೆ.<br /> <br /> ಕಳವು ಮಾಡಲಾದ ಸಿಮೆಂಟ್ ಅನ್ನು ಖರೀದಿಸಿರುವ ಪ್ರಕರಣದಿಂದ ಕೈಬಿಡಲು ಧಾರವಾಡದ ಮಂಜುನಾಥ ಎಂಬುವವರಿಗೆ ಪೊಲೀಸರು ರೂ.3 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು.<br /> <br /> ಈ ಸಂಬಂಧ ಮಂಜುನಾಥ ಅವರಿಂದ ರೂ.2.75 ಲಕ್ಷ ನಗದು ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತರು ಬಂಧಿಸಿದ್ದರು.<br /> <br /> ಲೋಕಾಯುಕ್ತರು ಎಸ್.ಐ ಅವರನ್ನು ಬಂಧಿಸಿ ಕರೆತರುತ್ತಿದ್ದ ಸಂದರ್ಭದಲ್ಲಿ ಎಸ್.ಐ ಸಂಬಂಧಿಕರು ಮತ್ತು ಕೆಲ ಸಾರ್ವಜನಿಕರು ಅಡ್ಡಗಟ್ಟಿ ಲೋಕಾಯುಕ್ತ ವಾಹನದ ಮೇಲೆ ಕಲ್ಲುತೂರಾಟ ನಡೆಸಿದ್ದನ್ನು ನೆನಪಿಸಿಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>