<p><strong>ಚಿತ್ರದುರ್ಗ: </strong>‘ಹೂಡಿಕೆದಾರರ ಸಮಾವೇಶದ ಕಾರಣ ನೀಡಿ ಬಸ್, ಲಾರಿಗಳಿಗೆ ಬೆಂಗಳೂರು ಪ್ರವೇಶಿಸಲು ಫೆ.1ರಿಂದ 10ರವರೆಗೆ ನಿರ್ಬಂಧ ಹೇರಿರುವುದು ರಾಜ್ಯ ಸರ್ಕಾರ ಎಷ್ಟರಮಟ್ಟಿಗೆ ಮೂಲಸೌಕರ್ಯ ಅಭಿವೃದ್ಧಿಪಡಿಸಿದೆ ಎಂಬುದನ್ನು ತೋರಿಸುತ್ತದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.<br /> <br /> ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆ ಸಂಬಂಧ ನಗರದ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಜನರ ತೆರಿಗೆ ಹಣದಲ್ಲಿ ಸರ್ಕಾರ ₹ 40 ಕೋಟಿ ಖರ್ಚು ಮಾಡಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಈಗ 10 ದಿನಗಳಿಗಾಗಿ ಲಾರಿ, ಬಸ್ಗಳ ಬೆಂಗಳೂರು ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಂತರವಾದರೂ ವಾಹನಗಳು ಬೆಂಗಳೂರಿಗೆ ಸಂಚರಿಸುತ್ತವೆ. ಹೀಗೆ ನಿರ್ಬಂಧ ಹೇರಿ ಸಮಾವೇಶ ಮಾಡುವುದರಿಂದ ಏನು ಸಾಧನೆ ಮಾಡಿದಂತಾಗುತ್ತದೆ’ ಎಂದು ಅವರು ಪ್ರಶ್ನಿಸಿದರು.<br /> <br /> ‘ಪಶ್ಚಿಮ ಬಂಗಾಳದಲ್ಲಿ ಕೆಲವು ವರ್ಷಗಳ ಹಿಂದೆ ಹೂಡಿಕೆದಾರರ ಸಮಾವೇಶ ನಡೆದ ಸಂದರ್ಭದಲ್ಲಿ ₹ 3 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ಭರವಸೆ ದೊರೆಯಿತು. ಆದರೆ, ಬಂದಿದ್ದು ಮಾತ್ರ ₹ 14 ಸಾವಿರ ಕೋಟಿ. ಸಮಾವೇಶ ಮಾಡಿದ ಕೂಡಲೇ ಬಂಡವಾಳ ಹರಿದುಬರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಹೂಡಿಕೆದಾರರ ಸಮಾವೇಶದ ಕಾರಣ ನೀಡಿ ಬಸ್, ಲಾರಿಗಳಿಗೆ ಬೆಂಗಳೂರು ಪ್ರವೇಶಿಸಲು ಫೆ.1ರಿಂದ 10ರವರೆಗೆ ನಿರ್ಬಂಧ ಹೇರಿರುವುದು ರಾಜ್ಯ ಸರ್ಕಾರ ಎಷ್ಟರಮಟ್ಟಿಗೆ ಮೂಲಸೌಕರ್ಯ ಅಭಿವೃದ್ಧಿಪಡಿಸಿದೆ ಎಂಬುದನ್ನು ತೋರಿಸುತ್ತದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.<br /> <br /> ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆ ಸಂಬಂಧ ನಗರದ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಜನರ ತೆರಿಗೆ ಹಣದಲ್ಲಿ ಸರ್ಕಾರ ₹ 40 ಕೋಟಿ ಖರ್ಚು ಮಾಡಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಈಗ 10 ದಿನಗಳಿಗಾಗಿ ಲಾರಿ, ಬಸ್ಗಳ ಬೆಂಗಳೂರು ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಂತರವಾದರೂ ವಾಹನಗಳು ಬೆಂಗಳೂರಿಗೆ ಸಂಚರಿಸುತ್ತವೆ. ಹೀಗೆ ನಿರ್ಬಂಧ ಹೇರಿ ಸಮಾವೇಶ ಮಾಡುವುದರಿಂದ ಏನು ಸಾಧನೆ ಮಾಡಿದಂತಾಗುತ್ತದೆ’ ಎಂದು ಅವರು ಪ್ರಶ್ನಿಸಿದರು.<br /> <br /> ‘ಪಶ್ಚಿಮ ಬಂಗಾಳದಲ್ಲಿ ಕೆಲವು ವರ್ಷಗಳ ಹಿಂದೆ ಹೂಡಿಕೆದಾರರ ಸಮಾವೇಶ ನಡೆದ ಸಂದರ್ಭದಲ್ಲಿ ₹ 3 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ಭರವಸೆ ದೊರೆಯಿತು. ಆದರೆ, ಬಂದಿದ್ದು ಮಾತ್ರ ₹ 14 ಸಾವಿರ ಕೋಟಿ. ಸಮಾವೇಶ ಮಾಡಿದ ಕೂಡಲೇ ಬಂಡವಾಳ ಹರಿದುಬರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>