<p><strong>ಬೆಂಗಳೂರು:</strong> ರಾಜ್ಯ ವಕೀಲರ ಪರಿಷತ್ಗೆ ಕಳೆದ ತಿಂಗಳು ನಡೆದ ಚುನಾವಣೆಯ ಮತ ಎಣಿಕೆಗೆ ನೀಡಿದ್ದ ತಡೆಯಾಜ್ಞೆ ಆದೇಶವನ್ನು ದೆಹಲಿಯಲ್ಲಿರುವ ಭಾರತೀಯ ವಕೀಲರ ಪರಿಷತ್ ಚುನಾವಣಾ ನ್ಯಾಯಮಂಡಳಿ ಮುಂದುವರಿಸಿದೆ.</p>.<p>ಈ ಕುರಿತಂತೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿರುವ ವಕೀಲ ದುರ್ಗಾಪ್ರಸಾದ್ ಹಾಗೂ ಎಚ್.ಸಿ.ಶಿವರಾಮು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯೂ ಆದ ನ್ಯಾಯಮಂಡಳಿ ಅಧ್ಯಕ್ಷ ಎಸ್.ಕೆ.ಮುಖರ್ಜಿ ತಡೆ ಮುಂದುವರಿಸಿ ಆದೇಶಿಸಿದರು.<br /> <br /> ಪ್ರಕರಣದ ಅಂತಿಮ ಆದೇಶ ಹೊರಡಿಸುವವರೆಗೂ ತಡೆಯಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ನ್ಯಾಯಮಂಡಳಿ ಹೇಳಿದೆ.</p>.<p>ಚುನಾವಣಾ ಅಧಿಕಾರಿಯಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ ಆಕ್ಷೇಪಣೆ ಅರ್ಜಿ ಸಲ್ಲಿಸಿದರು.</p>.<p>ಸಮಯ ಕಡಿಮೆ ಇದ್ದುದರಿಂದ ಹೈಕೋರ್ಟ್ ನ್ಯಾಯಮೂರ್ತಿಯನ್ನು ವೀಕ್ಷಕರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ ಎಂದು ನ್ಯಾಯ ಮಂಡಳಿಗೆ ತಿಳಿಸಿದರು.</p>.<p>‘25 ಪದಾಧಿಕಾರಿಗಳ ಸ್ಥಾನಕ್ಕೆ ನಡೆದಿರುವ ಚುನಾವಣೆಯಲ್ಲಿ ರಾಜ್ಯದ 198 ವಕೀಲರ ಸಂಘಗಳ ಸದಸ್ಯರು (ಸಿಒಪಿ ಹೊಂದಿದ) ಮತ ಚಲಾಯಿಸಿದ್ದಾರೆ. ಈ ಚುನಾವಣೆಗೆ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವೀಕ್ಷಕರನ್ನಾಗಿ ಮಾಡಬೇಕಿತ್ತು. ಆದರೆ, ಮಾಡಿಲ್ಲ ಹಾಗೂ ಅಕ್ರಮ ನಡೆದಿದೆ’ ಎಂಬುದು ಅರ್ಜಿದಾರರ ತಕರಾರು.</p>.<p><strong>ಇದನ್ನೂ ಓದಿ...</strong></p>.<p><strong><a href="http://www.prajavani.net/news/article/2018/04/06/564154.html" target="_blank">ವಕೀಲರ ಪರಿಷತ್ ಚುನಾವಣೆ: ಮತ ಎಣಿಕೆಗೆ ತಡೆ</a></strong></p>.<p><a href="http://www.prajavani.net/news/article/2018/03/27/561930.html" target="_blank"><strong>ವಕೀಲರ ಪರಿಷತ್ ಚುನಾವಣೆ ಇಂದು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ವಕೀಲರ ಪರಿಷತ್ಗೆ ಕಳೆದ ತಿಂಗಳು ನಡೆದ ಚುನಾವಣೆಯ ಮತ ಎಣಿಕೆಗೆ ನೀಡಿದ್ದ ತಡೆಯಾಜ್ಞೆ ಆದೇಶವನ್ನು ದೆಹಲಿಯಲ್ಲಿರುವ ಭಾರತೀಯ ವಕೀಲರ ಪರಿಷತ್ ಚುನಾವಣಾ ನ್ಯಾಯಮಂಡಳಿ ಮುಂದುವರಿಸಿದೆ.</p>.<p>ಈ ಕುರಿತಂತೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿರುವ ವಕೀಲ ದುರ್ಗಾಪ್ರಸಾದ್ ಹಾಗೂ ಎಚ್.ಸಿ.ಶಿವರಾಮು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯೂ ಆದ ನ್ಯಾಯಮಂಡಳಿ ಅಧ್ಯಕ್ಷ ಎಸ್.ಕೆ.ಮುಖರ್ಜಿ ತಡೆ ಮುಂದುವರಿಸಿ ಆದೇಶಿಸಿದರು.<br /> <br /> ಪ್ರಕರಣದ ಅಂತಿಮ ಆದೇಶ ಹೊರಡಿಸುವವರೆಗೂ ತಡೆಯಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ನ್ಯಾಯಮಂಡಳಿ ಹೇಳಿದೆ.</p>.<p>ಚುನಾವಣಾ ಅಧಿಕಾರಿಯಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ ಆಕ್ಷೇಪಣೆ ಅರ್ಜಿ ಸಲ್ಲಿಸಿದರು.</p>.<p>ಸಮಯ ಕಡಿಮೆ ಇದ್ದುದರಿಂದ ಹೈಕೋರ್ಟ್ ನ್ಯಾಯಮೂರ್ತಿಯನ್ನು ವೀಕ್ಷಕರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ ಎಂದು ನ್ಯಾಯ ಮಂಡಳಿಗೆ ತಿಳಿಸಿದರು.</p>.<p>‘25 ಪದಾಧಿಕಾರಿಗಳ ಸ್ಥಾನಕ್ಕೆ ನಡೆದಿರುವ ಚುನಾವಣೆಯಲ್ಲಿ ರಾಜ್ಯದ 198 ವಕೀಲರ ಸಂಘಗಳ ಸದಸ್ಯರು (ಸಿಒಪಿ ಹೊಂದಿದ) ಮತ ಚಲಾಯಿಸಿದ್ದಾರೆ. ಈ ಚುನಾವಣೆಗೆ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವೀಕ್ಷಕರನ್ನಾಗಿ ಮಾಡಬೇಕಿತ್ತು. ಆದರೆ, ಮಾಡಿಲ್ಲ ಹಾಗೂ ಅಕ್ರಮ ನಡೆದಿದೆ’ ಎಂಬುದು ಅರ್ಜಿದಾರರ ತಕರಾರು.</p>.<p><strong>ಇದನ್ನೂ ಓದಿ...</strong></p>.<p><strong><a href="http://www.prajavani.net/news/article/2018/04/06/564154.html" target="_blank">ವಕೀಲರ ಪರಿಷತ್ ಚುನಾವಣೆ: ಮತ ಎಣಿಕೆಗೆ ತಡೆ</a></strong></p>.<p><a href="http://www.prajavani.net/news/article/2018/03/27/561930.html" target="_blank"><strong>ವಕೀಲರ ಪರಿಷತ್ ಚುನಾವಣೆ ಇಂದು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>