<p><strong>ಕಾಳಗಿ (ಕಲಬುರ್ಗಿ ಜಿಲ್ಲೆ): </strong>ಕಾಳಗಿ ಮತ್ತು ಸುತ್ತಲಿನ ಆರು ತಾಂಡಾಗಳಲ್ಲಿ ಕೆಲವು ದಿನಗಳಿಂದ ಉಲ್ಬಣಗೊಂಡಿರುವ ವಾಂತಿಭೇದಿ ಪ್ರಕರಣಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮತ್ತು ಗ್ರಾಮಾಡಳಿತ ಹಗಲಿರುಳು ಪ್ರಯತ್ನ ಮಾಡುತ್ತಿವೆ.<br /> <br /> ಜೂನ್ 16ರ ಮಂಗಳವಾರ 8 ಪ್ರಕರಣ ಕಂಡುಬಂದಿರುವ ಬೆನ್ನಲ್ಲೇ ದಿನಕಳೆದಂತೆ ಅವುಗಳ ಸಂಖ್ಯೆ ಹೆಚ್ಚಾಗಿ ಭಾನುವಾರ ಸಂಜೆವರೆಗೆ ಒಟ್ಟು 175ಕ್ಕೂ ಹೆಚ್ಚು ಪ್ರಕರಣ ವರದಿಯಾಗಿವೆ. ಬಹುಪಾಲು ಜನರು ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರಲ್ಲಿ ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸಂಖ್ಯೆ ಅಧಿಕವಾಗಿದೆ.<br /> <br /> ಭಾನುವಾರ ಉಪಲೋಕಾಯುಕ್ತ ಸುಭಾಷ್ ಬಿ.ಆಡಿ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಕುಡಿಯುವ ನೀರಿನ ಮೂಲವಾದ ಬುಗ್ಗಿಯ ಬಾವಿಗೆ ಭೇಟಿ ನೀಡಿ ಪರಿಶೀಲಿಸಿದರು.<br /> <br /> ‘ಕಾಳಗಿ ಮತ್ತು ಲಕ್ಷ್ಮಣ ನಾಯಕ್ ತಾಂಡಾದಲ್ಲಿ ಭಾನುವಾರ ಬೆಳಿಗ್ಗೆ ಇಬ್ಬರು ಮೃತಪಟ್ಟಿದ್ದು ನಿಜ. ಆದರೆ, ಅವರು ವಾಂತಿಭೇದಿಯಿಂದ ಸಾವನ್ನಪ್ಪಿಲ್ಲ. ಒಬ್ಬ ಹೃದಯಘಾತದಿಂದ ಮೃತಪಟ್ಟಿದ್ದರೆ, ಮತ್ತೊಬ್ಬರದು ವಯೋಸಹಜ ಸಾವು’ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ (ಕಲಬುರ್ಗಿ ಜಿಲ್ಲೆ): </strong>ಕಾಳಗಿ ಮತ್ತು ಸುತ್ತಲಿನ ಆರು ತಾಂಡಾಗಳಲ್ಲಿ ಕೆಲವು ದಿನಗಳಿಂದ ಉಲ್ಬಣಗೊಂಡಿರುವ ವಾಂತಿಭೇದಿ ಪ್ರಕರಣಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮತ್ತು ಗ್ರಾಮಾಡಳಿತ ಹಗಲಿರುಳು ಪ್ರಯತ್ನ ಮಾಡುತ್ತಿವೆ.<br /> <br /> ಜೂನ್ 16ರ ಮಂಗಳವಾರ 8 ಪ್ರಕರಣ ಕಂಡುಬಂದಿರುವ ಬೆನ್ನಲ್ಲೇ ದಿನಕಳೆದಂತೆ ಅವುಗಳ ಸಂಖ್ಯೆ ಹೆಚ್ಚಾಗಿ ಭಾನುವಾರ ಸಂಜೆವರೆಗೆ ಒಟ್ಟು 175ಕ್ಕೂ ಹೆಚ್ಚು ಪ್ರಕರಣ ವರದಿಯಾಗಿವೆ. ಬಹುಪಾಲು ಜನರು ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರಲ್ಲಿ ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸಂಖ್ಯೆ ಅಧಿಕವಾಗಿದೆ.<br /> <br /> ಭಾನುವಾರ ಉಪಲೋಕಾಯುಕ್ತ ಸುಭಾಷ್ ಬಿ.ಆಡಿ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಕುಡಿಯುವ ನೀರಿನ ಮೂಲವಾದ ಬುಗ್ಗಿಯ ಬಾವಿಗೆ ಭೇಟಿ ನೀಡಿ ಪರಿಶೀಲಿಸಿದರು.<br /> <br /> ‘ಕಾಳಗಿ ಮತ್ತು ಲಕ್ಷ್ಮಣ ನಾಯಕ್ ತಾಂಡಾದಲ್ಲಿ ಭಾನುವಾರ ಬೆಳಿಗ್ಗೆ ಇಬ್ಬರು ಮೃತಪಟ್ಟಿದ್ದು ನಿಜ. ಆದರೆ, ಅವರು ವಾಂತಿಭೇದಿಯಿಂದ ಸಾವನ್ನಪ್ಪಿಲ್ಲ. ಒಬ್ಬ ಹೃದಯಘಾತದಿಂದ ಮೃತಪಟ್ಟಿದ್ದರೆ, ಮತ್ತೊಬ್ಬರದು ವಯೋಸಹಜ ಸಾವು’ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>