ವರದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಹಳಸಿದೆ. ಹೀಗಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಹಿಂದುತ್ವ ಭಾಷಣ ಮಾಡುತ್ತಾರೆ. ಅಲ್ಲೇ ಹಿಂದುತ್ವದ ಮೋಡಿ ನಡೆದಿಲ್ಲ. ಇನ್ನು ಇಲ್ಲಿ ನಡೆಯುತ್ತದೆಯಾ? ಅದು ಸಾಧ್ಯವಿಲ್ಲ. ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಈ ವಿಧಾನಸಭೆಯನ್ನೂ ನಾವು ಗೆಲ್ಲುತ್ತೇವೆ. ಮುಂದಿನ ಲೋಕಸಭೆಯಲ್ಲೂ ಕಾಂಗ್ರೆಸ್ ಪಕ್ಷವೇ ಗೆದ್ದು ಬೇರೆ ಪಕ್ಷಗಳ ಸಹಕಾರದಿಂದ ಸರ್ಕಾರ ರಚನೆ ಮಾಡಲಿದೆ’ ಎಂದು ಹೇಳಿದರು.