<p><strong>ಬೆಂಗಳೂರು</strong>: ವಸತಿ ಖಾತೆ ಸಚಿವ ವಿ. ಸೋಮಣ್ಣ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದ್ದು, ಹಲ್ಲೆ ನಡೆಸಿದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.<br /> <br /> ಎಂದಿನಂತೆ ವಿಧಾನ ಸೌಧದ ಮೂರನೇಯ ಮಹಡಿಯಲ್ಲಿರುವ ತಮ್ಮ ಅಧಿಕೃತ ಕಚೇರಿಗೆ ಸೋಮಣ್ಣ ಶನಿವಾರ ಆಗಮಿಸಿದ ಕೆಲ ಸಮಯದಲ್ಲಿ ಈ ಘಟನೆ ಜರುಗಿದೆ.<br /> <br /> ಹಲ್ಲೆ ನಡೆಸಿ ಸಧ್ಯ ಪೊಲೀಸರ ವಶದಲ್ಲಿರುವ ವ್ಯಕ್ತಿಯನ್ನು ಹೆಬ್ಬಾಳ ಮತಕ್ಷೇತ್ರದ ಗಂಗೇನ ಹಳ್ಳಿಯ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ.<br /> <br /> ಸೋಮಣ್ಣ ಮೇಲೆ ಹಲ್ಲೆ ನಡೆಸುವ ವೇಳೆ ಪ್ರಸಾದ್ ತಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡನಲ್ಲದೇ, ಬಿಜೆಪಿಯಿಂದ ತನಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.<br /> <br /> ಪೊಲೀಸರ ವಶದಲ್ಲಿರುವ ಪ್ರಸಾದ್ನನ್ನು ತಪಾಸಣೆ ಮಾಡಿದ ವೇಳೆ ಅವನ ಬಳಿ ಚಾಕು ಇರಿಸಿಕೊಂಡಿದ್ದು ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಸತಿ ಖಾತೆ ಸಚಿವ ವಿ. ಸೋಮಣ್ಣ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದ್ದು, ಹಲ್ಲೆ ನಡೆಸಿದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.<br /> <br /> ಎಂದಿನಂತೆ ವಿಧಾನ ಸೌಧದ ಮೂರನೇಯ ಮಹಡಿಯಲ್ಲಿರುವ ತಮ್ಮ ಅಧಿಕೃತ ಕಚೇರಿಗೆ ಸೋಮಣ್ಣ ಶನಿವಾರ ಆಗಮಿಸಿದ ಕೆಲ ಸಮಯದಲ್ಲಿ ಈ ಘಟನೆ ಜರುಗಿದೆ.<br /> <br /> ಹಲ್ಲೆ ನಡೆಸಿ ಸಧ್ಯ ಪೊಲೀಸರ ವಶದಲ್ಲಿರುವ ವ್ಯಕ್ತಿಯನ್ನು ಹೆಬ್ಬಾಳ ಮತಕ್ಷೇತ್ರದ ಗಂಗೇನ ಹಳ್ಳಿಯ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ.<br /> <br /> ಸೋಮಣ್ಣ ಮೇಲೆ ಹಲ್ಲೆ ನಡೆಸುವ ವೇಳೆ ಪ್ರಸಾದ್ ತಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡನಲ್ಲದೇ, ಬಿಜೆಪಿಯಿಂದ ತನಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.<br /> <br /> ಪೊಲೀಸರ ವಶದಲ್ಲಿರುವ ಪ್ರಸಾದ್ನನ್ನು ತಪಾಸಣೆ ಮಾಡಿದ ವೇಳೆ ಅವನ ಬಳಿ ಚಾಕು ಇರಿಸಿಕೊಂಡಿದ್ದು ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>