ಕೃಷ್ಣಪ್ಪ, ಅವರ ಪುತ್ರ ಹಾಗೂ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಪತ್ನಿ ಪ್ರಿಯದರ್ಶಿನಿ ಹಾಗೂ ಪುತ್ರ ಪ್ರದೀಪ್ ವಿರುದ್ಧ ಸೋಮವಾರ ಪ್ರಕಾಶ್ ದೂರು ಸಲ್ಲಿಸಿದ್ದರು. ಈ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೇ, ಬೇಡವೇ ಎಂಬುದರ ಬಗ್ಗೆ ಗುರುವಾರ ಆದೇಶ ಹೊರಡಿಸುವುದಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಸಮಯ ನಿಗದಿ ಮಾಡಿದ್ದರು.