<p><strong>ಬೆಂಗಳೂರು: </strong>ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರು ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಂಪ್ಲಿ ಶಾಸಕ ಟಿ.ಎಚ್.ಸುರೇಶ್ ಬಾಬು, ಐಎಲ್ಸಿ ಇಂಡಸ್ಟ್ರೀಸ್ ಮಾಲೀಕ ಕೆ.ಸೋಮಶೇಖರ್, ಹೊಸಪೇಟೆಯ ಕೆ.ಗೋವಿಂದರಾಜು ಮತ್ತು ಐ.ಎರ್ರಿಸ್ವಾಮಿಗೆ ಜಾಮೀನು ನೀಡಲು ಶನಿವಾರ ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ.<br /> <br /> ‘ನಾಲ್ಕೂ ಆರೋಪಿಗಳೂ ಗೊತ್ತಿದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಅವರು ತಿಳಿಯದೇ ತಪ್ಪು ಮಾಡಿದ್ದಾರೆ ಎಂಬ ವಾದ ಒಪ್ಪಲು ಸಾಧ್ಯವಿಲ್ಲ. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಲಾಗದು’ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರವಿ.ಎಂ.ನಾಯಕ್ ಆದೇಶಿಸಿದ್ದಾರೆ.<br /> <br /> ಬೇಲೆಕೇರಿ ಹಗರಣಕ್ಕೆ ಸಂಬಂಧಿಸಿದ 2 ಪ್ರಕರಣಗಳಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್, ಸಂಬಂಧಿ ಪ್ರಕಾಶ್ ಹೆಗಡೆ, ಹೊಸಪೇಟೆಯ ಕೆ.ಜನಾರ್ದನ ರೆಡ್ಡಿ ಮತ್ತು ಐ.ಎರ್ರಿಸ್ವಾಮಿಗೆ ಜಾಮೀನು ನಿರಾಕರಿಸಿ ಸಿಬಿಐ ವಿಶೇಷ ಕೋರ್ಟ್ ಗುರುವಾರ ಹಾಗೂ ಶುಕ್ರವಾರ ಎರಡು ಪ್ರತ್ಯೇಕ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರು ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಂಪ್ಲಿ ಶಾಸಕ ಟಿ.ಎಚ್.ಸುರೇಶ್ ಬಾಬು, ಐಎಲ್ಸಿ ಇಂಡಸ್ಟ್ರೀಸ್ ಮಾಲೀಕ ಕೆ.ಸೋಮಶೇಖರ್, ಹೊಸಪೇಟೆಯ ಕೆ.ಗೋವಿಂದರಾಜು ಮತ್ತು ಐ.ಎರ್ರಿಸ್ವಾಮಿಗೆ ಜಾಮೀನು ನೀಡಲು ಶನಿವಾರ ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ.<br /> <br /> ‘ನಾಲ್ಕೂ ಆರೋಪಿಗಳೂ ಗೊತ್ತಿದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಅವರು ತಿಳಿಯದೇ ತಪ್ಪು ಮಾಡಿದ್ದಾರೆ ಎಂಬ ವಾದ ಒಪ್ಪಲು ಸಾಧ್ಯವಿಲ್ಲ. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಲಾಗದು’ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರವಿ.ಎಂ.ನಾಯಕ್ ಆದೇಶಿಸಿದ್ದಾರೆ.<br /> <br /> ಬೇಲೆಕೇರಿ ಹಗರಣಕ್ಕೆ ಸಂಬಂಧಿಸಿದ 2 ಪ್ರಕರಣಗಳಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್, ಸಂಬಂಧಿ ಪ್ರಕಾಶ್ ಹೆಗಡೆ, ಹೊಸಪೇಟೆಯ ಕೆ.ಜನಾರ್ದನ ರೆಡ್ಡಿ ಮತ್ತು ಐ.ಎರ್ರಿಸ್ವಾಮಿಗೆ ಜಾಮೀನು ನಿರಾಕರಿಸಿ ಸಿಬಿಐ ವಿಶೇಷ ಕೋರ್ಟ್ ಗುರುವಾರ ಹಾಗೂ ಶುಕ್ರವಾರ ಎರಡು ಪ್ರತ್ಯೇಕ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>