ಶಿವಮೊಗ್ಗ: ತಕ್ಷಣವೇ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಭಾನುವಾರ ಇಲ್ಲಿ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದಾನಂದಗೌಡ ಮುಖ್ಯಮಂತ್ರಿಯಾದ ಒಂಬತ್ತು ತಿಂಗಳಲ್ಲಿ ಒಮ್ಮೆಯೂ ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲ ಎಂದರು.
ಯಡಿಯೂರಪ್ಪ ಕಟ್ಟಿ ಬೆಳೆಸಿದ ಪಕ್ಷ ಬಿಜೆಪಿ. ಅವರು ಎಂದಿಗೂ ಪಕ್ಷ ತೊರೆಯುವುದಿಲ್ಲ. ಅವರೊಬ್ಬ ಸಮೂಹ ಮುಖಂಡ. ಹಾಗಾಗಿ ಅವರೊಂದಿಗೆ ನಾವೆಲ್ಲ ಇದ್ದೇವೆ ಎಂದರು.