ಗೋಸುಂಬೆ ಪಕ್ಷ:ಶಾಸಕ ಸಿ.ಟಿ.ರವಿ ಮಾತನಾಡಿ ‘ಜೆಡಿಎಸ್ ಗೋಸುಂಬೆ ಪಕ್ಷ. ಎಚ್.ಡಿ.ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಅವರ ಪುಂಡಾಟ ನೋಡಿದ್ದರೂ ಎಚ್.ಡಿ.ದೇವೇಗೌಡರಿಗೆ ಅವರ ಮೇಲೆ ಧೃತರಾಷ್ಟ್ರ ಪ್ರೇಮ ಹೊಂದಿದ್ದಾರೆ. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡ ಹೇಳಿದ್ದರು. ಆದರೆ ಮೋದಿ ಅವರು ಪ್ರಧಾನಿಯಾದ ನಂತರ ಅವರನ್ನು ಅತೀ ಹೆಚ್ಚು ಬಾರಿ ಭೇಟಿಯಾಗಿದ್ದಾರೆ. ಈಗ ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಬಂದ್ ಮಾಡುವುದಾಗಿ ಹೇಳುತ್ತಿದ್ದಾರೆ. ಅವರು ದಕ್ಷಿಣ ಭಾರತದ ಜನರನ್ನು ಗುತ್ತಿಗೆ ಪಡೆದಿದ್ದಾರಾ’ ಎಂದು ಪ್ರಶ್ನಿಸಿದರು.