ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಭಾಗೂ ಪ್ರಾಣ ಬೆದರಿಕೆ

Last Updated 1 ಫೆಬ್ರುವರಿ 2011, 19:05 IST
ಅಕ್ಷರ ಗಾತ್ರ

 ಬೆಂಗಳೂರು: ‘ನೀವು ಇದೇ ರೀತಿ ಕಠಿಣ ಕ್ರಮಗಳನ್ನು ತೆಗೆದು  ಕೊಂಡರೆ   ನಿಮಗೂ ಆ ಮಹಾರಾಷ್ಟ್ರ ಹೆಚ್ಚುವರಿ ಜಿಲ್ಲಾಧಿಕಾರಿ ಯಶವಂತ ಸೋನಾವಣೆಗೆ ಆದ ಗತಿಯೇ ಆಗುತ್ತದೆ. ಹುಷಾರ್’!

 ‘ಹೀಗೆ ಅಪರಿಚಿತ ವ್ಯಕ್ತಿಯೊಬ್ಬ ನನ್ನ ಮೊಬೈಲ್‌ಗೆ ಇತ್ತೀಚೆಗೆ ದೂರವಾಣಿ ಕರೆ ಮಾಡಿ ಬೆದರಿಸಿದ್ದಾನೆ’ ಎಂದು ಆಹಾರ ಮತ್ತು ಇಂಧನ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಂಗಳವಾರ ಸುದ್ದಿಗಾರರಿಗೆ  ತಿಳಿಸಿದರು.‘ಅಕ್ರಮ ಪಡಿತರ ಚೀಟಿ ಮತ್ತು ಅಡುಗೆ ಅನಿಲ ಸಿಲಿಂಡರ್‌ಗಳ ದುರ್ಬಳಕೆ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಕ್ಕೆ ವಿತರಕರಿಂದ ವಿರೋಧ ಇದೆ.

ಈ ಹಿನ್ನೆಲೆಯಲ್ಲಿ ನನ್ನ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತೀಚೆಗೆ  ಬೆದರಿಕೆ ಕರೆಗಳೂ ಬರುತ್ತಿವೆ’ ಎಂದು ಹೇಳಿದರು.‘ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ. ವ್ಯವಸ್ಥೆ ಸರಿ ಮಾಡುವುದೇ ನನ್ನ ಧ್ಯೇಯ. ಆ ನಿಟ್ಟಿನಲ್ಲಿ ಕೆಲಸ ಮಾಡುವೆ’ ಎಂದು ನುಡಿದರು.

ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದು ಯಾರು ಎನ್ನುವುದು ಇನ್ನೂ ಗೊತ್ತಾಗಿಲ್ಲ. ಬೆದರಿಕೆ ಕರೆ ಬಂದ ತಕ್ಷಣ ಅದನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಎಸ್.ಟಿ.ಡಿ ಬೂತ್‌ನಿಂದ ಬೆದರಿಕೆ ಕರೆ ಬಂದಿದೆ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT