<p>ನವದೆ<strong>ಹಲಿ (ಪಿಟಿಐ): </strong>ರೈಲ್ವೆ ಖಾತೆ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದೆ. <br /> <br /> ಷರೀಫ್ ಪರ ವಕೀಲರು ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಎರಡು ವಾರದೊಳಗೆ ಉತ್ತರ ನೀಡುವಂತೆಯೂ ಪೀಠ ಸಿಬಿಐಗೆ ನೋಟಿಸ್ ನೀಡಿದೆ. ರೈಲ್ವೆ ಸಚಿವರಾಗಿ ವಿದೇಶ ಪ್ರವಾಸದಲ್ಲಿ ತಮ್ಮಂದಿಗೆ ಖಾಸಗಿ ಸಿಬ್ಬಂದಿಯನ್ನು ಕರೆದೊಯ್ಯುವ ಅಧಿಕಾರವನ್ನು ಷರೀಫರು ಹೊಂದಿದ್ದರು ಎಂದು ವಾದಿಸಿದ್ದಾರೆ.<br /> <br /> ಷರೀಫ್ 1995ರಲ್ಲಿ ಸರ್ಕಾರಿ ವೆಚ್ಚದಲ್ಲಿ ವಿದೇಶ ಪ್ರವಾಸ ಕೈಗೊಳ್ಳುವ ಮೂಲಕ ಸರ್ಕಾರಿ ಬೊಕ್ಕಸ ದುರ್ಬಳಕೆ ಮಾಡಿಕೊಂಡ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆ. 21ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮಂಗಳವಾರ ತಿಳಿಸಿದ್ದರು. <br /> <br /> ರೈಲ್ವೆ ಸಚಿವರಾಗಿದ್ದಾಗ ಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದ ಷರೀಫ್ ತಮ್ಮ ಜತೆ ಆಪ್ತ ಕಾರ್ಯದರ್ಶಿ, ಶೀಘ್ರಲಿಪಿಕಾರರು ಹಾಗೂ ಚಾಲಕರನ್ನು ಸರ್ಕಾರಿ ವೆಚ್ಚದಲ್ಲೇ ಕರೆದೊಯ್ದಿದ್ದರು. ಇದರಿಂದ ಸರ್ಕಾರಕ್ಕೆ ರೂ. 7 ಲಕ್ಷ ನಷ್ಟವುಂಟಾಗಿತ್ತು ಎಂದು ಸಿಬಿಐ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆ<strong>ಹಲಿ (ಪಿಟಿಐ): </strong>ರೈಲ್ವೆ ಖಾತೆ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದೆ. <br /> <br /> ಷರೀಫ್ ಪರ ವಕೀಲರು ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಎರಡು ವಾರದೊಳಗೆ ಉತ್ತರ ನೀಡುವಂತೆಯೂ ಪೀಠ ಸಿಬಿಐಗೆ ನೋಟಿಸ್ ನೀಡಿದೆ. ರೈಲ್ವೆ ಸಚಿವರಾಗಿ ವಿದೇಶ ಪ್ರವಾಸದಲ್ಲಿ ತಮ್ಮಂದಿಗೆ ಖಾಸಗಿ ಸಿಬ್ಬಂದಿಯನ್ನು ಕರೆದೊಯ್ಯುವ ಅಧಿಕಾರವನ್ನು ಷರೀಫರು ಹೊಂದಿದ್ದರು ಎಂದು ವಾದಿಸಿದ್ದಾರೆ.<br /> <br /> ಷರೀಫ್ 1995ರಲ್ಲಿ ಸರ್ಕಾರಿ ವೆಚ್ಚದಲ್ಲಿ ವಿದೇಶ ಪ್ರವಾಸ ಕೈಗೊಳ್ಳುವ ಮೂಲಕ ಸರ್ಕಾರಿ ಬೊಕ್ಕಸ ದುರ್ಬಳಕೆ ಮಾಡಿಕೊಂಡ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆ. 21ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮಂಗಳವಾರ ತಿಳಿಸಿದ್ದರು. <br /> <br /> ರೈಲ್ವೆ ಸಚಿವರಾಗಿದ್ದಾಗ ಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದ ಷರೀಫ್ ತಮ್ಮ ಜತೆ ಆಪ್ತ ಕಾರ್ಯದರ್ಶಿ, ಶೀಘ್ರಲಿಪಿಕಾರರು ಹಾಗೂ ಚಾಲಕರನ್ನು ಸರ್ಕಾರಿ ವೆಚ್ಚದಲ್ಲೇ ಕರೆದೊಯ್ದಿದ್ದರು. ಇದರಿಂದ ಸರ್ಕಾರಕ್ಕೆ ರೂ. 7 ಲಕ್ಷ ನಷ್ಟವುಂಟಾಗಿತ್ತು ಎಂದು ಸಿಬಿಐ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>