<p><strong>ಬೆಂಗಳೂರು:</strong> ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ `ಸಕಾಲ~ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯೋಜನೆಯ ಉಸ್ತುವಾರಿಗಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಇಲಾಖೆವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.</p>.<p>ಸಕಾಲ ಯೋಜನೆಯ ಅನುಷ್ಠಾನದ ಬಗ್ಗೆ ಸೋಮವಾರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಶೇ 98.44ರಷ್ಟು ಅರ್ಜಿಗಳು ಕಾಲಮಿತಿಯಲ್ಲಿ ಇತ್ಯರ್ಥವಾಗಿವೆ. ತಿಂಗಳಾಂತ್ಯಕ್ಕೆ ಶೇ 99ರಷ್ಟು ಗುರಿ ಸಾಧಿಸುವ ಉದ್ದೇಶವಿದೆ ಎಂದರು.</p>.<p>ಏಪ್ರಿಲ್ 2ರಿಂದ 22ರವರೆಗೆ ಒಟ್ಟು 6,66,645 ಅರ್ಜಿಗಳು ಬಂದಿವೆ. ಶೇ 1.56ರಷ್ಟು ಅರ್ಜಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಅರ್ಜಿಗಳು ಕಾಲಮಿತಿಯಲ್ಲಿ ವಿಲೇವಾರಿ ಆಗಿವೆ ಎಂದು ಅವರು ಹೇಳಿದರು.</p>.<p>ಕಂದಾಯ ಇಲಾಖೆಯಲ್ಲಿ 2,47,500 ಅರ್ಜಿಗಳು ಬಂದಿದ್ದು, 1,50,916 ಅರ್ಜಿಗಳು ಇತ್ಯರ್ಥವಾಗಿವೆ. ಅದೇ ರೀತಿ ವಾಣಿಜ್ಯ ಇಲಾಖೆಯಲ್ಲಿ 1,85,883 ಅರ್ಜಿಗಳು ಬಂದಿದ್ದು, 1,69,546 ಇತ್ಯರ್ಥವಾಗಿವೆ ಎಂದು ತಿಳಿಸಿದರು.</p>.<p>ಸಕಾಲ ಮಿಷನ್ ವತಿಯಿಂದ ಪ್ರತಿದಿನ ಒಂದೊಂದು ಜಿಲ್ಲೆಯಲ್ಲಿ ನಾಲ್ಕು ಜನರನ್ನು ಸಂಪರ್ಕಿಸಿ `ಸಕಾಲ~ ಯೋಜನೆಯ ಬಗ್ಗೆ ಅವರ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ. ವಿವಿಧ ಇಲಾಖೆಗಳ ಕಾರ್ಯವೈಖರಿ, ಅರ್ಜಿಗಳ ವಿಲೇವಾರಿ, ಸಾರ್ವಜನಿಕರಿಂದ ಬಂದಿರುವ ಸಲಹೆಗಳ ಕುರಿತ ಸಲಹಾ ರೂಪದ ಕೈಪಿಡಿಯನ್ನು ಈ ತಿಂಗಳ ಅಂತ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ವಿವರಿಸಿದರು.</p>.<p>ಎಲ್ಲ ಪೊಲೀಸ್ ಠಾಣೆಗಳ ಮುಂದೆ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಮಾಹಿತಿ ಫಲಕವನ್ನು ಅಳವಡಿಸುವಂತೆ ಗೃಹ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಕಡೆ ಕಂಪ್ಯೂಟರ್, ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>151 ಸೇವೆಗಳ ಪೈಕಿ 21 ಸೇವೆಗಳಿಗೆ ಸಂಬಂಧಪಟ್ಟಂತೆ ಯಾವುದೇ ಅರ್ಜಿಗಳು ಬಂದಿಲ್ಲ. ಪಿಯುಸಿ ಫಲಿತಾಂಶ ಇನ್ನೂ ಬಂದಿಲ್ಲದ ಕಾರಣ ಮರುಎಣಿಕೆ, ಮರು ಮೌಲ್ಯಮಾಪನ ಇತ್ಯಾದಿಗಳಿಗೆ ಸಂಬಂಧಪಟ್ಟಂತೆ ಅರ್ಜಿಗಳು ಬಂದಿಲ್ಲ ಎಂದು ಅವರು ಹೇಳಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ 0.89, ಚಿತ್ರದುರ್ಗದಲ್ಲಿ ಶೇ 0.81, ವಿಜಾಪುರದಲ್ಲಿ ಶೇ 0.8, ಕೊಪ್ಪಳದಲ್ಲಿ ಶೇ 3.05, ರಾಯಚೂರಿನಲ್ಲಿ ಶೇ 2.82 ಹಾಗೂ ತುಮಕೂರಿನಲ್ಲಿ ಶೇ 2.93ರಷ್ಟು ಅರ್ಜಿಗಳು ವಿಲೇವಾರಿ ಆಗಬೇಕಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ `ಸಕಾಲ~ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯೋಜನೆಯ ಉಸ್ತುವಾರಿಗಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಇಲಾಖೆವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.</p>.<p>ಸಕಾಲ ಯೋಜನೆಯ ಅನುಷ್ಠಾನದ ಬಗ್ಗೆ ಸೋಮವಾರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಶೇ 98.44ರಷ್ಟು ಅರ್ಜಿಗಳು ಕಾಲಮಿತಿಯಲ್ಲಿ ಇತ್ಯರ್ಥವಾಗಿವೆ. ತಿಂಗಳಾಂತ್ಯಕ್ಕೆ ಶೇ 99ರಷ್ಟು ಗುರಿ ಸಾಧಿಸುವ ಉದ್ದೇಶವಿದೆ ಎಂದರು.</p>.<p>ಏಪ್ರಿಲ್ 2ರಿಂದ 22ರವರೆಗೆ ಒಟ್ಟು 6,66,645 ಅರ್ಜಿಗಳು ಬಂದಿವೆ. ಶೇ 1.56ರಷ್ಟು ಅರ್ಜಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಅರ್ಜಿಗಳು ಕಾಲಮಿತಿಯಲ್ಲಿ ವಿಲೇವಾರಿ ಆಗಿವೆ ಎಂದು ಅವರು ಹೇಳಿದರು.</p>.<p>ಕಂದಾಯ ಇಲಾಖೆಯಲ್ಲಿ 2,47,500 ಅರ್ಜಿಗಳು ಬಂದಿದ್ದು, 1,50,916 ಅರ್ಜಿಗಳು ಇತ್ಯರ್ಥವಾಗಿವೆ. ಅದೇ ರೀತಿ ವಾಣಿಜ್ಯ ಇಲಾಖೆಯಲ್ಲಿ 1,85,883 ಅರ್ಜಿಗಳು ಬಂದಿದ್ದು, 1,69,546 ಇತ್ಯರ್ಥವಾಗಿವೆ ಎಂದು ತಿಳಿಸಿದರು.</p>.<p>ಸಕಾಲ ಮಿಷನ್ ವತಿಯಿಂದ ಪ್ರತಿದಿನ ಒಂದೊಂದು ಜಿಲ್ಲೆಯಲ್ಲಿ ನಾಲ್ಕು ಜನರನ್ನು ಸಂಪರ್ಕಿಸಿ `ಸಕಾಲ~ ಯೋಜನೆಯ ಬಗ್ಗೆ ಅವರ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ. ವಿವಿಧ ಇಲಾಖೆಗಳ ಕಾರ್ಯವೈಖರಿ, ಅರ್ಜಿಗಳ ವಿಲೇವಾರಿ, ಸಾರ್ವಜನಿಕರಿಂದ ಬಂದಿರುವ ಸಲಹೆಗಳ ಕುರಿತ ಸಲಹಾ ರೂಪದ ಕೈಪಿಡಿಯನ್ನು ಈ ತಿಂಗಳ ಅಂತ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ವಿವರಿಸಿದರು.</p>.<p>ಎಲ್ಲ ಪೊಲೀಸ್ ಠಾಣೆಗಳ ಮುಂದೆ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಮಾಹಿತಿ ಫಲಕವನ್ನು ಅಳವಡಿಸುವಂತೆ ಗೃಹ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಕಡೆ ಕಂಪ್ಯೂಟರ್, ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>151 ಸೇವೆಗಳ ಪೈಕಿ 21 ಸೇವೆಗಳಿಗೆ ಸಂಬಂಧಪಟ್ಟಂತೆ ಯಾವುದೇ ಅರ್ಜಿಗಳು ಬಂದಿಲ್ಲ. ಪಿಯುಸಿ ಫಲಿತಾಂಶ ಇನ್ನೂ ಬಂದಿಲ್ಲದ ಕಾರಣ ಮರುಎಣಿಕೆ, ಮರು ಮೌಲ್ಯಮಾಪನ ಇತ್ಯಾದಿಗಳಿಗೆ ಸಂಬಂಧಪಟ್ಟಂತೆ ಅರ್ಜಿಗಳು ಬಂದಿಲ್ಲ ಎಂದು ಅವರು ಹೇಳಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ 0.89, ಚಿತ್ರದುರ್ಗದಲ್ಲಿ ಶೇ 0.81, ವಿಜಾಪುರದಲ್ಲಿ ಶೇ 0.8, ಕೊಪ್ಪಳದಲ್ಲಿ ಶೇ 3.05, ರಾಯಚೂರಿನಲ್ಲಿ ಶೇ 2.82 ಹಾಗೂ ತುಮಕೂರಿನಲ್ಲಿ ಶೇ 2.93ರಷ್ಟು ಅರ್ಜಿಗಳು ವಿಲೇವಾರಿ ಆಗಬೇಕಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>